37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

ಬಂದಾರು: ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜ.೭ರಿಂದ ೧೨ ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆಯು ಜ.2ರಂದು ನಡೆಯಿತು.

ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.

ಸೀತಾರಾಮ ಶೆಟ್ಟಿ ಕೆಂಬರ್ಜೆ ಮಾರ್ಗದರ್ಶನ ನೀಡಿದರು. ಉದ್ಯಮಿ ರೈತಬಂಧು ಆಹಾರೋಧ್ಯಮ ಮಾಲಕರಾದ ಶಿವಶಂಕರ ನಾಯಕ್, ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕ ಬಾಲಕೃಷ್ಣ ಪೂಜಾರಿ ಬಜಗುತ್ತು, ಅಧ್ಯಕ್ಷ ಮಹಾಬಲ ಗೌಡ ಸಲಹೆ ಸೂಚನೆ ಮಾಹಿತಿ ಅವಲೋಕನ ಮಾಡಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾದೆ, ಕೋಶಾಧಿಕಾರಿ ಕೇಶವ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ, ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರ ಕುಕ್ಕಪ್ಪ ಗೌಡ ಉಪಸ್ಥಿತರಿದ್ದರು.

ಜೀರ್ಣೋದ್ದಾರ ಸಮಿತಿ ಮಾಜಿ ಅಧ್ಯಕ್ಷ ಆದಪ್ಪ ಗೌಡ, ಆಡಳಿತ ಮಂಡಳಿ ಕಾರ್ಯದರ್ಶಿ ಉಮೇಶ್ ಗೌಡ, ಮಹಿಳಾ ಸಮಿತಿಯ ಜ್ಯೋತಿ ಕುರುಡಂಗೆ ಸಮಯೋಚಿತವಾಗಿ ಅನಿಸಿಕೆ ವ್ಯಕ್ತಪಡಿಸಿದರು.

ಆಡಳಿತ ಮಂಡಳಿಯ, ಬ್ರಹ್ಮಕಲಶೋತ್ಸವ ಸಮಿತಿಯ, ಎಲ್ಲಾ ಉಪಸಮಿತಿಯ ಸಂಚಾಲಕರು, ಸಹಸಂಚಾಲಕರು, ಸರ್ವ ಸದಸ್ಯರು, ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಜೊತೆ ಕಾರ್ಯದರ್ಶಿ ಸತೀಶ್ ಬಾಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

Related posts

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಉಜಿರೆಯಲ್ಲಿ ಜಿತೇಶ್- ಅನ್ವೇಷಾ ಜೈನ್ ಮಾಲೀಕತ್ವದ “ಹೆಗ್ಡೆ ಮೆಡಿಕಲ್” ಶುಭಾರಂಭ

Suddi Udaya
error: Content is protected !!