25.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

ಬಂದಾರು: ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜ.೭ರಿಂದ ೧೨ ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆಯು ಜ.2ರಂದು ನಡೆಯಿತು.

ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.

ಸೀತಾರಾಮ ಶೆಟ್ಟಿ ಕೆಂಬರ್ಜೆ ಮಾರ್ಗದರ್ಶನ ನೀಡಿದರು. ಉದ್ಯಮಿ ರೈತಬಂಧು ಆಹಾರೋಧ್ಯಮ ಮಾಲಕರಾದ ಶಿವಶಂಕರ ನಾಯಕ್, ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕ ಬಾಲಕೃಷ್ಣ ಪೂಜಾರಿ ಬಜಗುತ್ತು, ಅಧ್ಯಕ್ಷ ಮಹಾಬಲ ಗೌಡ ಸಲಹೆ ಸೂಚನೆ ಮಾಹಿತಿ ಅವಲೋಕನ ಮಾಡಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾದೆ, ಕೋಶಾಧಿಕಾರಿ ಕೇಶವ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ, ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರ ಕುಕ್ಕಪ್ಪ ಗೌಡ ಉಪಸ್ಥಿತರಿದ್ದರು.

ಜೀರ್ಣೋದ್ದಾರ ಸಮಿತಿ ಮಾಜಿ ಅಧ್ಯಕ್ಷ ಆದಪ್ಪ ಗೌಡ, ಆಡಳಿತ ಮಂಡಳಿ ಕಾರ್ಯದರ್ಶಿ ಉಮೇಶ್ ಗೌಡ, ಮಹಿಳಾ ಸಮಿತಿಯ ಜ್ಯೋತಿ ಕುರುಡಂಗೆ ಸಮಯೋಚಿತವಾಗಿ ಅನಿಸಿಕೆ ವ್ಯಕ್ತಪಡಿಸಿದರು.

ಆಡಳಿತ ಮಂಡಳಿಯ, ಬ್ರಹ್ಮಕಲಶೋತ್ಸವ ಸಮಿತಿಯ, ಎಲ್ಲಾ ಉಪಸಮಿತಿಯ ಸಂಚಾಲಕರು, ಸಹಸಂಚಾಲಕರು, ಸರ್ವ ಸದಸ್ಯರು, ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಜೊತೆ ಕಾರ್ಯದರ್ಶಿ ಸತೀಶ್ ಬಾಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

Suddi Udaya
error: Content is protected !!