April 17, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

ಉಜಿರೆ: ಆರೋಗ್ಯ ಕ್ಷೇತ್ರದಲ್ಲಿ ಅನವರತ ಸೇವೆಯನ್ನು ನೀಡುತ್ತಾ ಬೆಳೆದ ಬೆನಕ ಆಸ್ಪತ್ರೆ ಇನ್ನಷ್ಟು ಬೆಳೆದು ಜನಹಿತ ಕೆಲಸ ಮಾಡುವಂತಾಗಲಿ ಎಂದು ಸೀತಾರಾಮ ಭಟ್ ಶುಭಹಾರೈಸಿದರು.

ಸೀತಾರಾಮ ಭಟ್ ಅವರು ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ವರ್ಷದ ಲಾಂಛನವನ್ನು ಆಸ್ಪತ್ರೆಯ ಆವರಣದಲ್ಲಿ ಅನಾವರಣಗೊಳಿಸಿ ಮಾತನಾಡುತ್ತಿದ್ದರು.

ರಜತಸಂಭ್ರಮ ಲಾಂಛನವು ಬೆನಕ ಆಸ್ಪತ್ರೆಯ ನಿಷ್ಕಲ್ಮಶ, ಗುಣಮಟ್ಟದ ಹಾಗೂ ನಗುಮುಖದ ಸೇವೆಯ ಪ್ರತೀಕ. ಇನ್ನಷ್ಟು ಜನಹಿತ ಸಂತೃಪ್ತ ಸೇವೆಯನ್ನು ಸಮರ್ಪಣಾಭಾವದಿಂದ ಒದಗಿಸುವಲ್ಲಿ ಈ ಲಾಂಛನ ಪ್ರೇರಣೆಯಾಗಲಿ ಎಂದು ಹಾರೈಸಿದರು.

ಬೆನಕ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಗೋಪಾಲಕೃಷ್ಣ ಪ್ರಾಸ್ತವಿಕವಾಗಿ ಮಾತನಾಡಿ ಇಪ್ಪತೈದು ವರ್ಷಗಳ ಹಿಂದೆ ಸಾಮಾನ್ಯ ಖಾಯಿಲೆಗಳಿಗೆ ಒಳರೋಗಿ ಚಿಕಿತ್ಸೆ ಪಡೆಯಲು ದೂರದ ಪಟ್ಟಣಕ್ಕೆ ಹೋಗಬೇಕಾದ ಅನಿವಾರ್ಯತೆ ಇತ್ತು. ಅಂದಿನ ಅಗತ್ಯವನ್ನು ಮನಗೊಂಡು ಆರಂಭವಾದ ಕೇವಲ ಹತ್ತು ಹಾಸಿಗೆಗಳ ಆಸ್ಪತ್ರೆ ಇಂದು ಸುಸಜ್ಜಿತ ನೂರು ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಬೆಳೆದು ನಿಂತಿದೆ. ಆಧುನಿಕ ಸೌಲಭ್ಯಗಳು, ಗುಣಮಟ್ಟದ ಸೇವೆ, ಸೇವಾ ಮನೋಭಾವದ ಸಿಬ್ಬಂಧಿ ಹಾಗೂ ನಮ್ಮ ಮೇಲೆ ಸಾರ್ವಜನಿಕರ ವಿಶ್ವಾದಿಂದಾಗಿ ನಮ್ಮ ಸಂಸ್ಥೆ ಬೆಳೆದು ನಿಂತಿದೆ. ನಾವು ನೀಡುವ ಸೇವೆ ನಮಗೆ ತೃಪ್ತಿ ತರುವುದರೊಂದಿಗೆ ನಮ್ಮಲ್ಲಿಗೆ ಬರುವ ರೋಗಿಗಳು ಗುಣಮುಖರಾಗಿ ಸಂತೃಪ್ತಿಯ ನಗುವಿನೊಂದಿಗೆ ತೆರಳಬೇಕೆಂಬುದೇ ನಮ್ಮ ಆಶಯ. ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದ ನಂತರ ಗುಣಮುಖರಾಗಿ ಸಂತಸದಿಂದ ಮರಳುವ ಜನತೆಯನ್ನು ಕಂಡಾಗ ವೈದ್ಯರ ಮನದಲ್ಲೊಂದು ಸಂತೃಪ್ತ ಭಾವ ಮೂಡುತ್ತದೆ. ಇಂಥ ಸಂತೃಪ್ತಿಯಲ್ಲೇ ಸಾರ್ಥಕತೆ ಕಾಣುವ ಪ್ರಯತ್ನ ನಮ್ಮದು. ಗುರುಹಿರಿಯರ ಆಶೀರ್ವಾದ, ಜನರ ಪ್ರೀತಿ, ನಮ್ಮ ಸಿಬ್ಬಂಧಿ ಹಾಗೂ ಕುಟುಂಬದ ಸದಸ್ಯರ ಸಹಕಾರದಿಂದಾಗಿ ನಮ್ಮ ಆಸ್ಪತ್ರೆಗೆ ಆಧುನಿಕ ಸ್ಪರ್ಷ ನೀಡಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಜಿ ಭಟ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವಸ್ಯ ವಂದಿಸಿದ ಕಾರ್ಯಕ್ರಮದಲ್ಲಿ ಡಾ| ಭಾರತಿ, ಡಾ| ಆದಿತ್ಯ ಡಾ| ಅಂಕಿತಾ ಹಾಗೂ ಆಸ್ಪತ್ರೆಯ ಸಿಬ್ಬಂದಿ ಭಾಗವಹಿಸಿದ್ದರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!