27.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಮಳೆಯಿಂದ ಹಾನಿಗೀಡಾದ ಪ್ರದೇಶದಲ್ಲಿ ಗ್ರಾಮೀಣ ಜನತೆಯ ಸಂಚಾರಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಶಾಸಕ ಹರೀಶ್ ಪೂಂಜರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಪ್ರಕಾರ ಕರ್ನಾಟಕ ಸರಕಾರವು ಲೋಕೋಪಯೋಗಿ ಇಲಾಖೆಯ ಮೂಲಕ ಈ ಕೆಳಗಿನ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ ಮಾಡಿದೆಯೆಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮರಕಡದಿಂದ ಪುದುವೆಟ್ಟು ಗ್ರಾಮದ ಮಿಯ್ಯಾರು ಸಂಪರ್ಕ ರಸ್ತೆ ಅಭಿವೃದ್ಧಿ-ರೂ.4 ಕೋಟಿ, ಧರ್ಮಸ್ಥಳ-ತೋಟತ್ತಾಡಿ-ಚಿಬಿದ್ರೆ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ-ರೂ.2 ಕೋಟಿ, ಪುಯ್ಯ-ಉಳಿಯ-ಕಂಚಿನಡ್ಕ-ಮುರ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ-ರೂ.1 ಕೋಟಿ, ನಾರಾವಿ-ಪಾಣಾಲು-ಮಾವಿನಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ-ರೂ.1ಕೋಟಿ, ಧರ್ಮಸ್ಥಳ ಮುಂಡಾಜೆ ರಸ್ತೆಯಲ್ಲಿ ಆಯ್ದ ಭಾಗಗಳಲ್ಲಿ ಸೇತುವೆ ನಿರ್ಮಾಣ- ರೂ.3.75 ಕೋಟಿ, ಉಜಿರೆ-ಇಂದಬೆಟ್ಟು ರಸ್ತೆಯ ಅಂಬಡಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ-ರೂ.2.50 ಕೋಟಿ ಬಿಡುಗಡೆಗೊಂಡಿದ್ದು ಶೀಘ್ರವೇ ಕಾಮಗಾರಿ ಚಾಲನೆಯಾಗಲಿದೆಯೆಂದು ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related posts

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya
error: Content is protected !!