23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಮಳೆಯಿಂದ ಹಾನಿಗೀಡಾದ ಪ್ರದೇಶದಲ್ಲಿ ಗ್ರಾಮೀಣ ಜನತೆಯ ಸಂಚಾರಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಶಾಸಕ ಹರೀಶ್ ಪೂಂಜರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಪ್ರಕಾರ ಕರ್ನಾಟಕ ಸರಕಾರವು ಲೋಕೋಪಯೋಗಿ ಇಲಾಖೆಯ ಮೂಲಕ ಈ ಕೆಳಗಿನ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ ಮಾಡಿದೆಯೆಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮರಕಡದಿಂದ ಪುದುವೆಟ್ಟು ಗ್ರಾಮದ ಮಿಯ್ಯಾರು ಸಂಪರ್ಕ ರಸ್ತೆ ಅಭಿವೃದ್ಧಿ-ರೂ.4 ಕೋಟಿ, ಧರ್ಮಸ್ಥಳ-ತೋಟತ್ತಾಡಿ-ಚಿಬಿದ್ರೆ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ-ರೂ.2 ಕೋಟಿ, ಪುಯ್ಯ-ಉಳಿಯ-ಕಂಚಿನಡ್ಕ-ಮುರ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ-ರೂ.1 ಕೋಟಿ, ನಾರಾವಿ-ಪಾಣಾಲು-ಮಾವಿನಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ-ರೂ.1ಕೋಟಿ, ಧರ್ಮಸ್ಥಳ ಮುಂಡಾಜೆ ರಸ್ತೆಯಲ್ಲಿ ಆಯ್ದ ಭಾಗಗಳಲ್ಲಿ ಸೇತುವೆ ನಿರ್ಮಾಣ- ರೂ.3.75 ಕೋಟಿ, ಉಜಿರೆ-ಇಂದಬೆಟ್ಟು ರಸ್ತೆಯ ಅಂಬಡಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ-ರೂ.2.50 ಕೋಟಿ ಬಿಡುಗಡೆಗೊಂಡಿದ್ದು ಶೀಘ್ರವೇ ಕಾಮಗಾರಿ ಚಾಲನೆಯಾಗಲಿದೆಯೆಂದು ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related posts

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya
error: Content is protected !!