September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಮಳೆಯಿಂದ ಹಾನಿಗೀಡಾದ ಪ್ರದೇಶದಲ್ಲಿ ಗ್ರಾಮೀಣ ಜನತೆಯ ಸಂಚಾರಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಶಾಸಕ ಹರೀಶ್ ಪೂಂಜರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಪ್ರಕಾರ ಕರ್ನಾಟಕ ಸರಕಾರವು ಲೋಕೋಪಯೋಗಿ ಇಲಾಖೆಯ ಮೂಲಕ ಈ ಕೆಳಗಿನ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ ಮಾಡಿದೆಯೆಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮರಕಡದಿಂದ ಪುದುವೆಟ್ಟು ಗ್ರಾಮದ ಮಿಯ್ಯಾರು ಸಂಪರ್ಕ ರಸ್ತೆ ಅಭಿವೃದ್ಧಿ-ರೂ.4 ಕೋಟಿ, ಧರ್ಮಸ್ಥಳ-ತೋಟತ್ತಾಡಿ-ಚಿಬಿದ್ರೆ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ-ರೂ.2 ಕೋಟಿ, ಪುಯ್ಯ-ಉಳಿಯ-ಕಂಚಿನಡ್ಕ-ಮುರ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ-ರೂ.1 ಕೋಟಿ, ನಾರಾವಿ-ಪಾಣಾಲು-ಮಾವಿನಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ-ರೂ.1ಕೋಟಿ, ಧರ್ಮಸ್ಥಳ ಮುಂಡಾಜೆ ರಸ್ತೆಯಲ್ಲಿ ಆಯ್ದ ಭಾಗಗಳಲ್ಲಿ ಸೇತುವೆ ನಿರ್ಮಾಣ- ರೂ.3.75 ಕೋಟಿ, ಉಜಿರೆ-ಇಂದಬೆಟ್ಟು ರಸ್ತೆಯ ಅಂಬಡಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ-ರೂ.2.50 ಕೋಟಿ ಬಿಡುಗಡೆಗೊಂಡಿದ್ದು ಶೀಘ್ರವೇ ಕಾಮಗಾರಿ ಚಾಲನೆಯಾಗಲಿದೆಯೆಂದು ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related posts

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

Suddi Udaya
error: Content is protected !!