April 7, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

ಬೆಳ್ತಂಗಡಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ೬ ತಿಂಗಳ ಮಗು ವೃಂದಳನ್ನು ಕರೆದೊಯ್ಯಲಾಯಿತು. ಖ್ಯಾತ ಮುಳುಗು ತಜ್ಞ, ಸಾಮಾಜ ಸೇವಕ ಈಶ್ವರ್ ಮಲ್ಪೆ ಅವರ ಆಂಬುಲೆನ್ಸ್ ಮೂಲಕ ಮಗುವನ್ನು ಉಚಿತವಾಗಿ ಚಿಕಿತ್ಸೆಗೆ ಕರೆದೊಯ್ಯಲಾಯಿತು.

ಮಣಿಪಾಲದಿಂದ ಹಿರಿಯಡ್ಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ,ಬೆಳ್ತಂಗಡಿ, ಉಜಿರೆ, ಚಾರ್ಮಾಡಿ,. ಮೂಡಿಗೆರೆ, ಬೆಲೂರು, ಹಾಸನ, ಚನ್ನರಾಯಪಟ್ಣ, ಬೆಳ್ಳೂರು ಕ್ರಾಸ್, ನೆಲಮಂಗಲ ಮೂಲಕ ಜಯದೇವ ಆಸ್ಪತ್ರೆಗೆ ಕರೆಯದೊಯ್ಯಲಾಗುತ್ತಿದೆ.

ಮಣಿಪಾಲದಿಂದ ಹೊರಟ ಅಂಬುಲೆನ್ಸ್‌ಗೆ ಬೆಂಗಳೂರು ಮುಟ್ಟುವವರೆಗೆ ಯಾವುದೆ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಸಾರ್ವಜನಿಕರು, ವಾಹನ ಸಾವಾರರು ದಾರಿ ಮಾಡಿಕೊಟ್ಟರು, ಅಲ್ಲಲ್ಲಿ ಪೊಲೀಸರು ನಿಂತು ಜಿರೋ ಟ್ರಾಫಿಕ್‌ಗೆ ಸಹಕರಿಸಿದರು. ಅಂಬ್ಯುಲೆನ್ಸ್ ಬೆಳ್ತಂಗಡಿ ತಾಲೂಕಿನ ನಾರಾವಿ, ಕುತ್ಲೂರು, ಅಳದಂಗಡಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ,

ಸೋಮಂತಡ್ಕ, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ ಮೂಲಕ ಮೂಡಿಗೆರೆಗೆ ತಲುಪುವರೆಗೆ ವಾಹನ ಸವರಾರು, ಸಾರ್ವಜನಿಕರು, ಪೊಲೀಸರು ಪೂರ್ಣ ಸಹಕಾರ ನೀಡಿದರು. ಮಣಿಪಾಲದಿಂದ ಬೆಂಗಳೂರಿಗೆ ಮಗುವಿನ ಚಿಕಿತ್ಸೆಗೆ ಕರೆದೊಯ್ಯುವ ಬಗ್ಗೆ ನಿನ್ನೆಯಿಂದಲೇ ವಾಟ್ಸಫ್‌ನಲ್ಲಿ ಮಾಹಿತಿ ಹಾಕಿ ಸಾರ್ವಜನಿಕರ ಹಾಗೂ ವಾಹನ ಚಾಲಕರ ಸಹಕಾರವನ್ನು ಕೋರಲಾಗಿತ್ತು.

Related posts

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya
error: Content is protected !!