22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

ಬೆಳ್ತಂಗಡಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ೬ ತಿಂಗಳ ಮಗು ವೃಂದಳನ್ನು ಕರೆದೊಯ್ಯಲಾಯಿತು. ಖ್ಯಾತ ಮುಳುಗು ತಜ್ಞ, ಸಾಮಾಜ ಸೇವಕ ಈಶ್ವರ್ ಮಲ್ಪೆ ಅವರ ಆಂಬುಲೆನ್ಸ್ ಮೂಲಕ ಮಗುವನ್ನು ಉಚಿತವಾಗಿ ಚಿಕಿತ್ಸೆಗೆ ಕರೆದೊಯ್ಯಲಾಯಿತು.

ಮಣಿಪಾಲದಿಂದ ಹಿರಿಯಡ್ಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ,ಬೆಳ್ತಂಗಡಿ, ಉಜಿರೆ, ಚಾರ್ಮಾಡಿ,. ಮೂಡಿಗೆರೆ, ಬೆಲೂರು, ಹಾಸನ, ಚನ್ನರಾಯಪಟ್ಣ, ಬೆಳ್ಳೂರು ಕ್ರಾಸ್, ನೆಲಮಂಗಲ ಮೂಲಕ ಜಯದೇವ ಆಸ್ಪತ್ರೆಗೆ ಕರೆಯದೊಯ್ಯಲಾಗುತ್ತಿದೆ.

ಮಣಿಪಾಲದಿಂದ ಹೊರಟ ಅಂಬುಲೆನ್ಸ್‌ಗೆ ಬೆಂಗಳೂರು ಮುಟ್ಟುವವರೆಗೆ ಯಾವುದೆ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಸಾರ್ವಜನಿಕರು, ವಾಹನ ಸಾವಾರರು ದಾರಿ ಮಾಡಿಕೊಟ್ಟರು, ಅಲ್ಲಲ್ಲಿ ಪೊಲೀಸರು ನಿಂತು ಜಿರೋ ಟ್ರಾಫಿಕ್‌ಗೆ ಸಹಕರಿಸಿದರು. ಅಂಬ್ಯುಲೆನ್ಸ್ ಬೆಳ್ತಂಗಡಿ ತಾಲೂಕಿನ ನಾರಾವಿ, ಕುತ್ಲೂರು, ಅಳದಂಗಡಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ,

ಸೋಮಂತಡ್ಕ, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ ಮೂಲಕ ಮೂಡಿಗೆರೆಗೆ ತಲುಪುವರೆಗೆ ವಾಹನ ಸವರಾರು, ಸಾರ್ವಜನಿಕರು, ಪೊಲೀಸರು ಪೂರ್ಣ ಸಹಕಾರ ನೀಡಿದರು. ಮಣಿಪಾಲದಿಂದ ಬೆಂಗಳೂರಿಗೆ ಮಗುವಿನ ಚಿಕಿತ್ಸೆಗೆ ಕರೆದೊಯ್ಯುವ ಬಗ್ಗೆ ನಿನ್ನೆಯಿಂದಲೇ ವಾಟ್ಸಫ್‌ನಲ್ಲಿ ಮಾಹಿತಿ ಹಾಕಿ ಸಾರ್ವಜನಿಕರ ಹಾಗೂ ವಾಹನ ಚಾಲಕರ ಸಹಕಾರವನ್ನು ಕೋರಲಾಗಿತ್ತು.

Related posts

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ವಂಚನೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಬೃಹತ್ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!