25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಉಜಿರೆ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಹಾಗೂ ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ

ಉಜಿರೆ: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬ್ರಹ್ಮಶ್ರೀ ವೇ| ಮೂ| ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರ ಉಪಸ್ಥಿತಿಯಲ್ಲಿ ಶ್ರೀ ಲಕ್ಷ್ಮೀಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಜ.2ರಂದು ನಡೆಯಿತು.

ಬೆಳಗ್ಗೆ ಗಣಪತಿ ಹೋಮದಿಂದ ಪ್ರಾರಂಭಿಸಿ ವಿವಿಧ ಹೋಮ-ಹವನ, ಶ್ರೀ ನಾಗ ದೇವರ ಬಿಂಬ ಪ್ರತಿಷ್ಠೆ, ಪಂಜುರ್ಲಿ ದೈವದ ಪದ್ಮಶಿಲಾ ಪ್ರತಿಷ್ಠಾಪನೆ, ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್, ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವಿಕುಮಾರ್ ಬರಮೇಲು, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya
error: Content is protected !!