September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

ಬಂದಾರು: ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ ಜ.2ರಂದು ನಡೆಯಿತು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ, ಸೀತಾರಾಮ ಶೆಟ್ಟಿ ಕೆಂಬರ್ಜೆ, ಉದ್ಯಮಿ ರೈತಬಂಧು ಆಹಾರೋಧ್ಯಮ ಮಾಲಕರಾದ ಶಿವಶಂಕರ ನಾಯಕ್, ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕ ಬಾಲಕೃಷ್ಣ ಪೂಜಾರಿ ಬಜಗುತ್ತು, ಅಧ್ಯಕ್ಷ ಮಹಾಬಲ ಗೌಡ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾದೆ, ಕೋಶಾಧಿಕಾರಿ ಕೇಶವ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ, ಅರ್ಚಕ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರ ಕುಕ್ಕಪ್ಪ ಗೌಡ, ಜೀರ್ಣೋದ್ದಾರ ಸಮಿತಿ ಮಾಜಿ ಅಧ್ಯಕ್ಷ ಆದಪ್ಪ ಗೌಡ, ಆಡಳಿತ ಮಂಡಳಿ ಕಾರ್ಯದರ್ಶಿ ಉಮೇಶ್ ಗೌಡ ಉಪಸ್ಥಿತರಿದ್ದರು.

ಗಿರೀಶ್ ಗೌಡ ನಡ ಸಾಹಿತ್ಯ, ಸ್ವಾತಿ ಗೌಡ ನಡ ಗಾಯನ, ನಿತಿನ್ ಕೋಟ್ಯಾನ್ ಉಜಿರೆ ಪ್ರಚಾರ ಕಲೆ ಮತ್ತು ಸಂಕಲನ, ದಿನೇಶ್ ಗೌಡ ಅಡ್ಡಾರು ಸಹಕಾರದಲ್ಲಿ ಆಡಿಯೋ ಮೂಡಿಬಂದಿರುತ್ತದೆ.

ಆಡಳಿತ ಮಂಡಳಿಯ, ಬ್ರಹ್ಮಕಲಶೋತ್ಸವ ಸಮಿತಿಯ, ಎಲ್ಲಾ ಉಪಸಮಿತಿಯ ಸಂಚಾಲಕರು, ಸಹಸಂಚಾಲಕರು, ಸರ್ವ ಸದಸ್ಯರು, ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಜೊತೆ ಕಾರ್ಯದರ್ಶಿ ಸತೀಶ್ ಬಾಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಬೆಳ್ತಂಗಡಿ: ವಿಶೇಷಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!