38.6 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

ಉಜಿರೆ: ಆರೋಗ್ಯ ಕ್ಷೇತ್ರದಲ್ಲಿ ಅನವರತ ಸೇವೆಯನ್ನು ನೀಡುತ್ತಾ ಬೆಳೆದ ಬೆನಕ ಆಸ್ಪತ್ರೆ ಇನ್ನಷ್ಟು ಬೆಳೆದು ಜನಹಿತ ಕೆಲಸ ಮಾಡುವಂತಾಗಲಿ ಎಂದು ಸೀತಾರಾಮ ಭಟ್ ಶುಭಹಾರೈಸಿದರು.

ಸೀತಾರಾಮ ಭಟ್ ಅವರು ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ವರ್ಷದ ಲಾಂಛನವನ್ನು ಆಸ್ಪತ್ರೆಯ ಆವರಣದಲ್ಲಿ ಅನಾವರಣಗೊಳಿಸಿ ಮಾತನಾಡುತ್ತಿದ್ದರು.

ರಜತಸಂಭ್ರಮ ಲಾಂಛನವು ಬೆನಕ ಆಸ್ಪತ್ರೆಯ ನಿಷ್ಕಲ್ಮಶ, ಗುಣಮಟ್ಟದ ಹಾಗೂ ನಗುಮುಖದ ಸೇವೆಯ ಪ್ರತೀಕ. ಇನ್ನಷ್ಟು ಜನಹಿತ ಸಂತೃಪ್ತ ಸೇವೆಯನ್ನು ಸಮರ್ಪಣಾಭಾವದಿಂದ ಒದಗಿಸುವಲ್ಲಿ ಈ ಲಾಂಛನ ಪ್ರೇರಣೆಯಾಗಲಿ ಎಂದು ಹಾರೈಸಿದರು.

ಬೆನಕ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಗೋಪಾಲಕೃಷ್ಣ ಪ್ರಾಸ್ತವಿಕವಾಗಿ ಮಾತನಾಡಿ ಇಪ್ಪತೈದು ವರ್ಷಗಳ ಹಿಂದೆ ಸಾಮಾನ್ಯ ಖಾಯಿಲೆಗಳಿಗೆ ಒಳರೋಗಿ ಚಿಕಿತ್ಸೆ ಪಡೆಯಲು ದೂರದ ಪಟ್ಟಣಕ್ಕೆ ಹೋಗಬೇಕಾದ ಅನಿವಾರ್ಯತೆ ಇತ್ತು. ಅಂದಿನ ಅಗತ್ಯವನ್ನು ಮನಗೊಂಡು ಆರಂಭವಾದ ಕೇವಲ ಹತ್ತು ಹಾಸಿಗೆಗಳ ಆಸ್ಪತ್ರೆ ಇಂದು ಸುಸಜ್ಜಿತ ನೂರು ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಬೆಳೆದು ನಿಂತಿದೆ. ಆಧುನಿಕ ಸೌಲಭ್ಯಗಳು, ಗುಣಮಟ್ಟದ ಸೇವೆ, ಸೇವಾ ಮನೋಭಾವದ ಸಿಬ್ಬಂಧಿ ಹಾಗೂ ನಮ್ಮ ಮೇಲೆ ಸಾರ್ವಜನಿಕರ ವಿಶ್ವಾದಿಂದಾಗಿ ನಮ್ಮ ಸಂಸ್ಥೆ ಬೆಳೆದು ನಿಂತಿದೆ. ನಾವು ನೀಡುವ ಸೇವೆ ನಮಗೆ ತೃಪ್ತಿ ತರುವುದರೊಂದಿಗೆ ನಮ್ಮಲ್ಲಿಗೆ ಬರುವ ರೋಗಿಗಳು ಗುಣಮುಖರಾಗಿ ಸಂತೃಪ್ತಿಯ ನಗುವಿನೊಂದಿಗೆ ತೆರಳಬೇಕೆಂಬುದೇ ನಮ್ಮ ಆಶಯ. ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದ ನಂತರ ಗುಣಮುಖರಾಗಿ ಸಂತಸದಿಂದ ಮರಳುವ ಜನತೆಯನ್ನು ಕಂಡಾಗ ವೈದ್ಯರ ಮನದಲ್ಲೊಂದು ಸಂತೃಪ್ತ ಭಾವ ಮೂಡುತ್ತದೆ. ಇಂಥ ಸಂತೃಪ್ತಿಯಲ್ಲೇ ಸಾರ್ಥಕತೆ ಕಾಣುವ ಪ್ರಯತ್ನ ನಮ್ಮದು. ಗುರುಹಿರಿಯರ ಆಶೀರ್ವಾದ, ಜನರ ಪ್ರೀತಿ, ನಮ್ಮ ಸಿಬ್ಬಂಧಿ ಹಾಗೂ ಕುಟುಂಬದ ಸದಸ್ಯರ ಸಹಕಾರದಿಂದಾಗಿ ನಮ್ಮ ಆಸ್ಪತ್ರೆಗೆ ಆಧುನಿಕ ಸ್ಪರ್ಷ ನೀಡಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಜಿ ಭಟ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವಸ್ಯ ವಂದಿಸಿದ ಕಾರ್ಯಕ್ರಮದಲ್ಲಿ ಡಾ| ಭಾರತಿ, ಡಾ| ಆದಿತ್ಯ ಡಾ| ಅಂಕಿತಾ ಹಾಗೂ ಆಸ್ಪತ್ರೆಯ ಸಿಬ್ಬಂದಿ ಭಾಗವಹಿಸಿದ್ದರು.

Related posts

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya
error: Content is protected !!