25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

ಉಜಿರೆ: ಆರೋಗ್ಯ ಕ್ಷೇತ್ರದಲ್ಲಿ ಅನವರತ ಸೇವೆಯನ್ನು ನೀಡುತ್ತಾ ಬೆಳೆದ ಬೆನಕ ಆಸ್ಪತ್ರೆ ಇನ್ನಷ್ಟು ಬೆಳೆದು ಜನಹಿತ ಕೆಲಸ ಮಾಡುವಂತಾಗಲಿ ಎಂದು ಸೀತಾರಾಮ ಭಟ್ ಶುಭಹಾರೈಸಿದರು.

ಸೀತಾರಾಮ ಭಟ್ ಅವರು ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ವರ್ಷದ ಲಾಂಛನವನ್ನು ಆಸ್ಪತ್ರೆಯ ಆವರಣದಲ್ಲಿ ಅನಾವರಣಗೊಳಿಸಿ ಮಾತನಾಡುತ್ತಿದ್ದರು.

ರಜತಸಂಭ್ರಮ ಲಾಂಛನವು ಬೆನಕ ಆಸ್ಪತ್ರೆಯ ನಿಷ್ಕಲ್ಮಶ, ಗುಣಮಟ್ಟದ ಹಾಗೂ ನಗುಮುಖದ ಸೇವೆಯ ಪ್ರತೀಕ. ಇನ್ನಷ್ಟು ಜನಹಿತ ಸಂತೃಪ್ತ ಸೇವೆಯನ್ನು ಸಮರ್ಪಣಾಭಾವದಿಂದ ಒದಗಿಸುವಲ್ಲಿ ಈ ಲಾಂಛನ ಪ್ರೇರಣೆಯಾಗಲಿ ಎಂದು ಹಾರೈಸಿದರು.

ಬೆನಕ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಗೋಪಾಲಕೃಷ್ಣ ಪ್ರಾಸ್ತವಿಕವಾಗಿ ಮಾತನಾಡಿ ಇಪ್ಪತೈದು ವರ್ಷಗಳ ಹಿಂದೆ ಸಾಮಾನ್ಯ ಖಾಯಿಲೆಗಳಿಗೆ ಒಳರೋಗಿ ಚಿಕಿತ್ಸೆ ಪಡೆಯಲು ದೂರದ ಪಟ್ಟಣಕ್ಕೆ ಹೋಗಬೇಕಾದ ಅನಿವಾರ್ಯತೆ ಇತ್ತು. ಅಂದಿನ ಅಗತ್ಯವನ್ನು ಮನಗೊಂಡು ಆರಂಭವಾದ ಕೇವಲ ಹತ್ತು ಹಾಸಿಗೆಗಳ ಆಸ್ಪತ್ರೆ ಇಂದು ಸುಸಜ್ಜಿತ ನೂರು ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಬೆಳೆದು ನಿಂತಿದೆ. ಆಧುನಿಕ ಸೌಲಭ್ಯಗಳು, ಗುಣಮಟ್ಟದ ಸೇವೆ, ಸೇವಾ ಮನೋಭಾವದ ಸಿಬ್ಬಂಧಿ ಹಾಗೂ ನಮ್ಮ ಮೇಲೆ ಸಾರ್ವಜನಿಕರ ವಿಶ್ವಾದಿಂದಾಗಿ ನಮ್ಮ ಸಂಸ್ಥೆ ಬೆಳೆದು ನಿಂತಿದೆ. ನಾವು ನೀಡುವ ಸೇವೆ ನಮಗೆ ತೃಪ್ತಿ ತರುವುದರೊಂದಿಗೆ ನಮ್ಮಲ್ಲಿಗೆ ಬರುವ ರೋಗಿಗಳು ಗುಣಮುಖರಾಗಿ ಸಂತೃಪ್ತಿಯ ನಗುವಿನೊಂದಿಗೆ ತೆರಳಬೇಕೆಂಬುದೇ ನಮ್ಮ ಆಶಯ. ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದ ನಂತರ ಗುಣಮುಖರಾಗಿ ಸಂತಸದಿಂದ ಮರಳುವ ಜನತೆಯನ್ನು ಕಂಡಾಗ ವೈದ್ಯರ ಮನದಲ್ಲೊಂದು ಸಂತೃಪ್ತ ಭಾವ ಮೂಡುತ್ತದೆ. ಇಂಥ ಸಂತೃಪ್ತಿಯಲ್ಲೇ ಸಾರ್ಥಕತೆ ಕಾಣುವ ಪ್ರಯತ್ನ ನಮ್ಮದು. ಗುರುಹಿರಿಯರ ಆಶೀರ್ವಾದ, ಜನರ ಪ್ರೀತಿ, ನಮ್ಮ ಸಿಬ್ಬಂಧಿ ಹಾಗೂ ಕುಟುಂಬದ ಸದಸ್ಯರ ಸಹಕಾರದಿಂದಾಗಿ ನಮ್ಮ ಆಸ್ಪತ್ರೆಗೆ ಆಧುನಿಕ ಸ್ಪರ್ಷ ನೀಡಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಜಿ ಭಟ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವಸ್ಯ ವಂದಿಸಿದ ಕಾರ್ಯಕ್ರಮದಲ್ಲಿ ಡಾ| ಭಾರತಿ, ಡಾ| ಆದಿತ್ಯ ಡಾ| ಅಂಕಿತಾ ಹಾಗೂ ಆಸ್ಪತ್ರೆಯ ಸಿಬ್ಬಂದಿ ಭಾಗವಹಿಸಿದ್ದರು.

Related posts

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya
error: Content is protected !!