27.9 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

ಬೆಳ್ತಂಗಡಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ೬ ತಿಂಗಳ ಮಗು ವೃಂದಳನ್ನು ಕರೆದೊಯ್ಯಲಾಯಿತು. ಖ್ಯಾತ ಮುಳುಗು ತಜ್ಞ, ಸಾಮಾಜ ಸೇವಕ ಈಶ್ವರ್ ಮಲ್ಪೆ ಅವರ ಆಂಬುಲೆನ್ಸ್ ಮೂಲಕ ಮಗುವನ್ನು ಉಚಿತವಾಗಿ ಚಿಕಿತ್ಸೆಗೆ ಕರೆದೊಯ್ಯಲಾಯಿತು.

ಮಣಿಪಾಲದಿಂದ ಹಿರಿಯಡ್ಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ,ಬೆಳ್ತಂಗಡಿ, ಉಜಿರೆ, ಚಾರ್ಮಾಡಿ,. ಮೂಡಿಗೆರೆ, ಬೆಲೂರು, ಹಾಸನ, ಚನ್ನರಾಯಪಟ್ಣ, ಬೆಳ್ಳೂರು ಕ್ರಾಸ್, ನೆಲಮಂಗಲ ಮೂಲಕ ಜಯದೇವ ಆಸ್ಪತ್ರೆಗೆ ಕರೆಯದೊಯ್ಯಲಾಗುತ್ತಿದೆ.

ಮಣಿಪಾಲದಿಂದ ಹೊರಟ ಅಂಬುಲೆನ್ಸ್‌ಗೆ ಬೆಂಗಳೂರು ಮುಟ್ಟುವವರೆಗೆ ಯಾವುದೆ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಸಾರ್ವಜನಿಕರು, ವಾಹನ ಸಾವಾರರು ದಾರಿ ಮಾಡಿಕೊಟ್ಟರು, ಅಲ್ಲಲ್ಲಿ ಪೊಲೀಸರು ನಿಂತು ಜಿರೋ ಟ್ರಾಫಿಕ್‌ಗೆ ಸಹಕರಿಸಿದರು. ಅಂಬ್ಯುಲೆನ್ಸ್ ಬೆಳ್ತಂಗಡಿ ತಾಲೂಕಿನ ನಾರಾವಿ, ಕುತ್ಲೂರು, ಅಳದಂಗಡಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ,

ಸೋಮಂತಡ್ಕ, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ ಮೂಲಕ ಮೂಡಿಗೆರೆಗೆ ತಲುಪುವರೆಗೆ ವಾಹನ ಸವರಾರು, ಸಾರ್ವಜನಿಕರು, ಪೊಲೀಸರು ಪೂರ್ಣ ಸಹಕಾರ ನೀಡಿದರು. ಮಣಿಪಾಲದಿಂದ ಬೆಂಗಳೂರಿಗೆ ಮಗುವಿನ ಚಿಕಿತ್ಸೆಗೆ ಕರೆದೊಯ್ಯುವ ಬಗ್ಗೆ ನಿನ್ನೆಯಿಂದಲೇ ವಾಟ್ಸಫ್‌ನಲ್ಲಿ ಮಾಹಿತಿ ಹಾಕಿ ಸಾರ್ವಜನಿಕರ ಹಾಗೂ ವಾಹನ ಚಾಲಕರ ಸಹಕಾರವನ್ನು ಕೋರಲಾಗಿತ್ತು.

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜು : ಶೈಕ್ಷಣಿಕ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ – ‘ ಪುರಸ್ಕಾರ್ – 2025: ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧಕರಿಗೆ ಪುರಸ್ಕಾರ-ಸಾಧಕ ಶಿಕ್ಷಕರಿಗೆ ಸನ್ಮಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya
error: Content is protected !!