25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

ಬೆಳ್ತಂಗಡಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ೬ ತಿಂಗಳ ಮಗು ವೃಂದಳನ್ನು ಕರೆದೊಯ್ಯಲಾಯಿತು. ಖ್ಯಾತ ಮುಳುಗು ತಜ್ಞ, ಸಾಮಾಜ ಸೇವಕ ಈಶ್ವರ್ ಮಲ್ಪೆ ಅವರ ಆಂಬುಲೆನ್ಸ್ ಮೂಲಕ ಮಗುವನ್ನು ಉಚಿತವಾಗಿ ಚಿಕಿತ್ಸೆಗೆ ಕರೆದೊಯ್ಯಲಾಯಿತು.

ಮಣಿಪಾಲದಿಂದ ಹಿರಿಯಡ್ಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ,ಬೆಳ್ತಂಗಡಿ, ಉಜಿರೆ, ಚಾರ್ಮಾಡಿ,. ಮೂಡಿಗೆರೆ, ಬೆಲೂರು, ಹಾಸನ, ಚನ್ನರಾಯಪಟ್ಣ, ಬೆಳ್ಳೂರು ಕ್ರಾಸ್, ನೆಲಮಂಗಲ ಮೂಲಕ ಜಯದೇವ ಆಸ್ಪತ್ರೆಗೆ ಕರೆಯದೊಯ್ಯಲಾಗುತ್ತಿದೆ.

ಮಣಿಪಾಲದಿಂದ ಹೊರಟ ಅಂಬುಲೆನ್ಸ್‌ಗೆ ಬೆಂಗಳೂರು ಮುಟ್ಟುವವರೆಗೆ ಯಾವುದೆ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಸಾರ್ವಜನಿಕರು, ವಾಹನ ಸಾವಾರರು ದಾರಿ ಮಾಡಿಕೊಟ್ಟರು, ಅಲ್ಲಲ್ಲಿ ಪೊಲೀಸರು ನಿಂತು ಜಿರೋ ಟ್ರಾಫಿಕ್‌ಗೆ ಸಹಕರಿಸಿದರು. ಅಂಬ್ಯುಲೆನ್ಸ್ ಬೆಳ್ತಂಗಡಿ ತಾಲೂಕಿನ ನಾರಾವಿ, ಕುತ್ಲೂರು, ಅಳದಂಗಡಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ,

ಸೋಮಂತಡ್ಕ, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ ಮೂಲಕ ಮೂಡಿಗೆರೆಗೆ ತಲುಪುವರೆಗೆ ವಾಹನ ಸವರಾರು, ಸಾರ್ವಜನಿಕರು, ಪೊಲೀಸರು ಪೂರ್ಣ ಸಹಕಾರ ನೀಡಿದರು. ಮಣಿಪಾಲದಿಂದ ಬೆಂಗಳೂರಿಗೆ ಮಗುವಿನ ಚಿಕಿತ್ಸೆಗೆ ಕರೆದೊಯ್ಯುವ ಬಗ್ಗೆ ನಿನ್ನೆಯಿಂದಲೇ ವಾಟ್ಸಫ್‌ನಲ್ಲಿ ಮಾಹಿತಿ ಹಾಕಿ ಸಾರ್ವಜನಿಕರ ಹಾಗೂ ವಾಹನ ಚಾಲಕರ ಸಹಕಾರವನ್ನು ಕೋರಲಾಗಿತ್ತು.

Related posts

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!