September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

ಬೆಳ್ತಂಗಡಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ೬ ತಿಂಗಳ ಮಗು ವೃಂದಳನ್ನು ಕರೆದೊಯ್ಯಲಾಯಿತು. ಖ್ಯಾತ ಮುಳುಗು ತಜ್ಞ, ಸಾಮಾಜ ಸೇವಕ ಈಶ್ವರ್ ಮಲ್ಪೆ ಅವರ ಆಂಬುಲೆನ್ಸ್ ಮೂಲಕ ಮಗುವನ್ನು ಉಚಿತವಾಗಿ ಚಿಕಿತ್ಸೆಗೆ ಕರೆದೊಯ್ಯಲಾಯಿತು.

ಮಣಿಪಾಲದಿಂದ ಹಿರಿಯಡ್ಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ,ಬೆಳ್ತಂಗಡಿ, ಉಜಿರೆ, ಚಾರ್ಮಾಡಿ,. ಮೂಡಿಗೆರೆ, ಬೆಲೂರು, ಹಾಸನ, ಚನ್ನರಾಯಪಟ್ಣ, ಬೆಳ್ಳೂರು ಕ್ರಾಸ್, ನೆಲಮಂಗಲ ಮೂಲಕ ಜಯದೇವ ಆಸ್ಪತ್ರೆಗೆ ಕರೆಯದೊಯ್ಯಲಾಗುತ್ತಿದೆ.

ಮಣಿಪಾಲದಿಂದ ಹೊರಟ ಅಂಬುಲೆನ್ಸ್‌ಗೆ ಬೆಂಗಳೂರು ಮುಟ್ಟುವವರೆಗೆ ಯಾವುದೆ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಸಾರ್ವಜನಿಕರು, ವಾಹನ ಸಾವಾರರು ದಾರಿ ಮಾಡಿಕೊಟ್ಟರು, ಅಲ್ಲಲ್ಲಿ ಪೊಲೀಸರು ನಿಂತು ಜಿರೋ ಟ್ರಾಫಿಕ್‌ಗೆ ಸಹಕರಿಸಿದರು. ಅಂಬ್ಯುಲೆನ್ಸ್ ಬೆಳ್ತಂಗಡಿ ತಾಲೂಕಿನ ನಾರಾವಿ, ಕುತ್ಲೂರು, ಅಳದಂಗಡಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ,

ಸೋಮಂತಡ್ಕ, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ ಮೂಲಕ ಮೂಡಿಗೆರೆಗೆ ತಲುಪುವರೆಗೆ ವಾಹನ ಸವರಾರು, ಸಾರ್ವಜನಿಕರು, ಪೊಲೀಸರು ಪೂರ್ಣ ಸಹಕಾರ ನೀಡಿದರು. ಮಣಿಪಾಲದಿಂದ ಬೆಂಗಳೂರಿಗೆ ಮಗುವಿನ ಚಿಕಿತ್ಸೆಗೆ ಕರೆದೊಯ್ಯುವ ಬಗ್ಗೆ ನಿನ್ನೆಯಿಂದಲೇ ವಾಟ್ಸಫ್‌ನಲ್ಲಿ ಮಾಹಿತಿ ಹಾಕಿ ಸಾರ್ವಜನಿಕರ ಹಾಗೂ ವಾಹನ ಚಾಲಕರ ಸಹಕಾರವನ್ನು ಕೋರಲಾಗಿತ್ತು.

Related posts

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya
error: Content is protected !!