24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

ಉಜಿರೆ : ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತುಕಾರಾಮ ಸಾಲಿಯಾನ್ ಆರ್ಲ ಡಿ. 31ರಂದು ಸೇವಾ ನಿವೃತ್ತಿ ಹೊಂದಿದರು.

ಕಲ್ಮಂಜ ಗ್ರಾಮದ ಆರ್ಲ ನಿವಾಸಿಯಾಗಿರುವ, ಬಿ.ಕಾಂ ಪದವೀಧರರಾಗಿರುವ ತುಕಾರಾಮ ಅವರು 1987ರಿಂದ 89ರವರೆಗೆ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ, 1991 ರಿಂದ ಸುಧೀರ್ಘ 33 ವರ್ಷಗಳ ಕಾಲ ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತರಾಗಿದ್ದಾರೆ.

ಕೃಷಿಕರಾಗಿರುವ ಇವರು ಸಾಮಾಜಿಕ, ಧಾರ್ಮಿಕ, ಸಹಕಾರ ಸಂಘಗಳಲ್ಲಿ ಸಕ್ರಿಯರಾಗಿದ್ದಾರೆ. ಶ್ರೀ ರಾಮ ಕ್ಷೇತ್ರದ ಟ್ರಸ್ಟಿಯಾಗಿ, ಪರಡ್ಡ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ, ಕಳೆದ 25 ವರ್ಷಗಳಿಂದ ಉಜಿರೆ ಮೂರ್ತೆದಾರ ಸಹಕಾರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವುದಲ್ಲದೆ, ಹವ್ಯಾಸಿ ಕಲಾವಿದರಾಗಿಯೂ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.

Related posts

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!