ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

ಉಜಿರೆ : ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತುಕಾರಾಮ ಸಾಲಿಯಾನ್ ಆರ್ಲ ಡಿ. 31ರಂದು ಸೇವಾ ನಿವೃತ್ತಿ ಹೊಂದಿದರು.

ಕಲ್ಮಂಜ ಗ್ರಾಮದ ಆರ್ಲ ನಿವಾಸಿಯಾಗಿರುವ, ಬಿ.ಕಾಂ ಪದವೀಧರರಾಗಿರುವ ತುಕಾರಾಮ ಅವರು 1987ರಿಂದ 89ರವರೆಗೆ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ, 1991 ರಿಂದ ಸುಧೀರ್ಘ 33 ವರ್ಷಗಳ ಕಾಲ ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತರಾಗಿದ್ದಾರೆ.

ಕೃಷಿಕರಾಗಿರುವ ಇವರು ಸಾಮಾಜಿಕ, ಧಾರ್ಮಿಕ, ಸಹಕಾರ ಸಂಘಗಳಲ್ಲಿ ಸಕ್ರಿಯರಾಗಿದ್ದಾರೆ. ಶ್ರೀ ರಾಮ ಕ್ಷೇತ್ರದ ಟ್ರಸ್ಟಿಯಾಗಿ, ಪರಡ್ಡ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ, ಕಳೆದ 25 ವರ್ಷಗಳಿಂದ ಉಜಿರೆ ಮೂರ್ತೆದಾರ ಸಹಕಾರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವುದಲ್ಲದೆ, ಹವ್ಯಾಸಿ ಕಲಾವಿದರಾಗಿಯೂ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.

Related posts

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ಮೀಯಾರು ಕೆಮ್ಮಟ್ಟೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ವತಿಯಿಂದ ನೀರು ಉಳಿಸಿ ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya
error: Content is protected !!