27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

ಬೆಳ್ತಂಗಡಿ : ಇಲ್ಲಿಯ ರಾಮನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಬೆಳ್ತಂಗಡಿ, ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಸುವರ್ಣ ದೀಪೋತ್ಸವವು ಜ.3 ರಿಂದ ಪ್ರಾರಂಭಗೊಂಡು ಜ.5 ರವರೆಗೆ ನಡೆಯಲಿದೆ.

ಇಂದು (ಜ.3) ಬೆಳಿಗ್ಗೆ ಗಣಹೋಮ, ಶ್ರೀ ಶಾಸ್ತರ ಸಹಸ್ತ ಕದಳಿಯಾಗ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು. ದೀಪೋತ್ಸವದ ಉದ್ಘಾಟನೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ ಶೆಟ್ಟಿ ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಶಿವಪ್ರಸಾದ್ ಅಜಿಲ ನೆರವೇರಿಸಿದರು.

ಈ ಸಂದರ್ಭದಲ್ಲಿ ಅಯ್ಯಪ್ಪ ದೀಪೋತ್ಸವ ಅಧ್ಯಕ್ಷ ನಾರಾಯಣ ಭಟ್ ಮುಗುಳಿ, ಟ್ರಸ್ಟಿನ ಅಧ್ಯಕ್ಷ ಶರತ್ ಕುಮಾರ್,
ಪ್ರಕಾಶ್ ಗುರು ಸ್ವಾಮಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


ದಿಪೋತ್ಸವ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಚಾರ ಸಮಿತಿಯ ಅಧ್ಯಕ್ಷ ತುಕಾರಾಂ ಧನ್ಯವಾದವಿತ್ತರು.

ನಂತರ ಮಧ್ಯಾಹ್ನ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ , ಸಂಜೆ 4 ಗಂಟೆಗೆ ಹೊರೆಕಾಣಿಕೆ ಮೆರವಣಿಗೆ (ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ) ರಾತ್ರಿ 8.30ಕ್ಕೆ ಧಾರ್ಮಿಕ ಸಭೆ ಹಾಗೂ ಮನರಂಜನಾ ಕಾರ್ಯಕ್ರಮ ನಡೆಯಲಿದೆ.

Related posts

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya
error: Content is protected !!