23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

ಬೆಳ್ತಂಗಡಿ : ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಕಾಮಗಾರಿ ಮುಗ್ರೋಡಿ ಕನ್ಸಟ್ರಕ್ಷನ್ ತೆಕ್ಕೆಗೆ ಬಂದ ನಂತರ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಅಲ್ಲಲ್ಲಿ ನಿಲ್ಲಿಸಿದ್ದ ಮುಗ್ರೋಡಿ ಕನ್ಸೆಕ್ಷನ್ ಸೇರಿದ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಗಳನ್ನು ಕಳವು ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಹೆದ್ದಾರಿಯ ಕಾಮಗಾರಿ ನಡೆಸಲು ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ಬಳಕೆ ಮಾಡಲಾಗುತ್ತಿದ್ದು, ದಿನದ ಕೆಲಸದ ನಂತರ ಈ ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಲಾಗುತ್ತಿದೆ. ಆದರೆ ಕಳ್ಳರು ಹಿಟ್ಯಾಚಿಗಳ ಬ್ಯಾಟರಿ ಮತ್ತು ಡೀಸೆಲ್ ಗೆ ಕನ್ನ ಹಾಕುತ್ತಿದ್ದಾರೆ.

ಹಿಟ್ಯಾಚಿಗಳಿಂದ ಸರಿ ಸುಮಾರು 20 ಬ್ಯಾಟರಿಗಳನ್ನು ಕಳ್ಳರು ಎಗರಿಸಿದ್ದಾರೆ. ರಾತ್ರಿ ಸಮಯದಲ್ಲಿ ಬರುವ ಕಳ್ಳರು ಬ್ಯಾಟರಿಗಳನ್ನು ಕದ್ದುಕೊಂಡು ಹೋಗುತ್ತಿದ್ದಾರೆ. ಸರಿ ಸುಮಾರು ಲಕ್ಷ ಬೆಲೆಬಾಳುವ ಬ್ಯಾಟರಿಗಳು ಈಗಾಗಲೇ ಕಳವಾಗಿದೆ.

ಬ್ಯಾಟರಿ ಕಳ್ಳತನದಿಂದ ಹೆದ್ದಾರಿಯ ಕಾಮಗಾರಿ ಕುಂಠಿತಗೊಳ್ಳುತ್ತಿದ್ದು, ಮುಗ್ರೋಡಿ ಕನ್ಸಟ್ರಕ್ಷನ್ ಸಂಸ್ಥೆಯ ವಾಹನಗಳ ಎಲ್ಲಾ ಕೆಲಸಗಳು ಮಂಗಳೂರಿನಲ್ಲಿ ನಡೆಯುತ್ತಿದೆ. ಬ್ಯಾಟರಿ ಕೂಡ ಮಂಗಳೂರಿನಿಂದ ಪೂರೈಕೆಯಾಗುತ್ತದೆ. ಹೀಗಾಗಿ ಬ್ಯಾಟರಿ ಇಲ್ಲದೆ ಹಿಟ್ಯಾಚಿಗಳು ಕೆಲಸ ಮಾಡಲು ಆಗುತ್ತಿಲ್ಲ. ಬ್ಯಾಟರಿ ಬರುವವರೆಗೆ ಕಾಮಗಾರಿ ಸ್ಥಗಿತಗೊಳ್ಳುತ್ತಿದೆ.

ಈ ಬಗ್ಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Related posts

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

Suddi Udaya
error: Content is protected !!