30.6 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

ಬೆಳ್ತಂಗಡಿ : ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಕಾಮಗಾರಿ ಮುಗ್ರೋಡಿ ಕನ್ಸಟ್ರಕ್ಷನ್ ತೆಕ್ಕೆಗೆ ಬಂದ ನಂತರ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಅಲ್ಲಲ್ಲಿ ನಿಲ್ಲಿಸಿದ್ದ ಮುಗ್ರೋಡಿ ಕನ್ಸೆಕ್ಷನ್ ಸೇರಿದ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಗಳನ್ನು ಕಳವು ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಹೆದ್ದಾರಿಯ ಕಾಮಗಾರಿ ನಡೆಸಲು ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ಬಳಕೆ ಮಾಡಲಾಗುತ್ತಿದ್ದು, ದಿನದ ಕೆಲಸದ ನಂತರ ಈ ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಲಾಗುತ್ತಿದೆ. ಆದರೆ ಕಳ್ಳರು ಹಿಟ್ಯಾಚಿಗಳ ಬ್ಯಾಟರಿ ಮತ್ತು ಡೀಸೆಲ್ ಗೆ ಕನ್ನ ಹಾಕುತ್ತಿದ್ದಾರೆ.

ಹಿಟ್ಯಾಚಿಗಳಿಂದ ಸರಿ ಸುಮಾರು 20 ಬ್ಯಾಟರಿಗಳನ್ನು ಕಳ್ಳರು ಎಗರಿಸಿದ್ದಾರೆ. ರಾತ್ರಿ ಸಮಯದಲ್ಲಿ ಬರುವ ಕಳ್ಳರು ಬ್ಯಾಟರಿಗಳನ್ನು ಕದ್ದುಕೊಂಡು ಹೋಗುತ್ತಿದ್ದಾರೆ. ಸರಿ ಸುಮಾರು ಲಕ್ಷ ಬೆಲೆಬಾಳುವ ಬ್ಯಾಟರಿಗಳು ಈಗಾಗಲೇ ಕಳವಾಗಿದೆ.

ಬ್ಯಾಟರಿ ಕಳ್ಳತನದಿಂದ ಹೆದ್ದಾರಿಯ ಕಾಮಗಾರಿ ಕುಂಠಿತಗೊಳ್ಳುತ್ತಿದ್ದು, ಮುಗ್ರೋಡಿ ಕನ್ಸಟ್ರಕ್ಷನ್ ಸಂಸ್ಥೆಯ ವಾಹನಗಳ ಎಲ್ಲಾ ಕೆಲಸಗಳು ಮಂಗಳೂರಿನಲ್ಲಿ ನಡೆಯುತ್ತಿದೆ. ಬ್ಯಾಟರಿ ಕೂಡ ಮಂಗಳೂರಿನಿಂದ ಪೂರೈಕೆಯಾಗುತ್ತದೆ. ಹೀಗಾಗಿ ಬ್ಯಾಟರಿ ಇಲ್ಲದೆ ಹಿಟ್ಯಾಚಿಗಳು ಕೆಲಸ ಮಾಡಲು ಆಗುತ್ತಿಲ್ಲ. ಬ್ಯಾಟರಿ ಬರುವವರೆಗೆ ಕಾಮಗಾರಿ ಸ್ಥಗಿತಗೊಳ್ಳುತ್ತಿದೆ.

ಈ ಬಗ್ಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya
error: Content is protected !!