July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

ಬೆಳ್ತಂಗಡಿ : ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಕಾಮಗಾರಿ ಮುಗ್ರೋಡಿ ಕನ್ಸಟ್ರಕ್ಷನ್ ತೆಕ್ಕೆಗೆ ಬಂದ ನಂತರ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಅಲ್ಲಲ್ಲಿ ನಿಲ್ಲಿಸಿದ್ದ ಮುಗ್ರೋಡಿ ಕನ್ಸೆಕ್ಷನ್ ಸೇರಿದ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಗಳನ್ನು ಕಳವು ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಹೆದ್ದಾರಿಯ ಕಾಮಗಾರಿ ನಡೆಸಲು ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ಬಳಕೆ ಮಾಡಲಾಗುತ್ತಿದ್ದು, ದಿನದ ಕೆಲಸದ ನಂತರ ಈ ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಲಾಗುತ್ತಿದೆ. ಆದರೆ ಕಳ್ಳರು ಹಿಟ್ಯಾಚಿಗಳ ಬ್ಯಾಟರಿ ಮತ್ತು ಡೀಸೆಲ್ ಗೆ ಕನ್ನ ಹಾಕುತ್ತಿದ್ದಾರೆ.

ಹಿಟ್ಯಾಚಿಗಳಿಂದ ಸರಿ ಸುಮಾರು 20 ಬ್ಯಾಟರಿಗಳನ್ನು ಕಳ್ಳರು ಎಗರಿಸಿದ್ದಾರೆ. ರಾತ್ರಿ ಸಮಯದಲ್ಲಿ ಬರುವ ಕಳ್ಳರು ಬ್ಯಾಟರಿಗಳನ್ನು ಕದ್ದುಕೊಂಡು ಹೋಗುತ್ತಿದ್ದಾರೆ. ಸರಿ ಸುಮಾರು ಲಕ್ಷ ಬೆಲೆಬಾಳುವ ಬ್ಯಾಟರಿಗಳು ಈಗಾಗಲೇ ಕಳವಾಗಿದೆ.

ಬ್ಯಾಟರಿ ಕಳ್ಳತನದಿಂದ ಹೆದ್ದಾರಿಯ ಕಾಮಗಾರಿ ಕುಂಠಿತಗೊಳ್ಳುತ್ತಿದ್ದು, ಮುಗ್ರೋಡಿ ಕನ್ಸಟ್ರಕ್ಷನ್ ಸಂಸ್ಥೆಯ ವಾಹನಗಳ ಎಲ್ಲಾ ಕೆಲಸಗಳು ಮಂಗಳೂರಿನಲ್ಲಿ ನಡೆಯುತ್ತಿದೆ. ಬ್ಯಾಟರಿ ಕೂಡ ಮಂಗಳೂರಿನಿಂದ ಪೂರೈಕೆಯಾಗುತ್ತದೆ. ಹೀಗಾಗಿ ಬ್ಯಾಟರಿ ಇಲ್ಲದೆ ಹಿಟ್ಯಾಚಿಗಳು ಕೆಲಸ ಮಾಡಲು ಆಗುತ್ತಿಲ್ಲ. ಬ್ಯಾಟರಿ ಬರುವವರೆಗೆ ಕಾಮಗಾರಿ ಸ್ಥಗಿತಗೊಳ್ಳುತ್ತಿದೆ.

ಈ ಬಗ್ಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ಪುಂಜಲ್ ಕಟ್ಟೆ ಕ್ಲಸ್ಟರ್ ವತಿಯಿಂದ ರಘುಪತಿ ಕೆ ರಾವ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಬಸದಿ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಪ್ರತಾಪ್ ಸಿಂಹ ನಾಯಕ್ ರವರಿಗೆ ಆಡಳಿತ ಮಂಡಳಿಯಿಂದ ಅಭಿನಂದನೆ

Suddi Udaya
error: Content is protected !!