ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

ಬೆಳ್ತಂಗಡಿ : ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಕಾಮಗಾರಿ ಮುಗ್ರೋಡಿ ಕನ್ಸಟ್ರಕ್ಷನ್ ತೆಕ್ಕೆಗೆ ಬಂದ ನಂತರ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಅಲ್ಲಲ್ಲಿ ನಿಲ್ಲಿಸಿದ್ದ ಮುಗ್ರೋಡಿ ಕನ್ಸೆಕ್ಷನ್ ಸೇರಿದ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಗಳನ್ನು ಕಳವು ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಹೆದ್ದಾರಿಯ ಕಾಮಗಾರಿ ನಡೆಸಲು ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ಬಳಕೆ ಮಾಡಲಾಗುತ್ತಿದ್ದು, ದಿನದ ಕೆಲಸದ ನಂತರ ಈ ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಲಾಗುತ್ತಿದೆ. ಆದರೆ ಕಳ್ಳರು ಹಿಟ್ಯಾಚಿಗಳ ಬ್ಯಾಟರಿ ಮತ್ತು ಡೀಸೆಲ್ ಗೆ ಕನ್ನ ಹಾಕುತ್ತಿದ್ದಾರೆ.

ಹಿಟ್ಯಾಚಿಗಳಿಂದ ಸರಿ ಸುಮಾರು 20 ಬ್ಯಾಟರಿಗಳನ್ನು ಕಳ್ಳರು ಎಗರಿಸಿದ್ದಾರೆ. ರಾತ್ರಿ ಸಮಯದಲ್ಲಿ ಬರುವ ಕಳ್ಳರು ಬ್ಯಾಟರಿಗಳನ್ನು ಕದ್ದುಕೊಂಡು ಹೋಗುತ್ತಿದ್ದಾರೆ. ಸರಿ ಸುಮಾರು ಲಕ್ಷ ಬೆಲೆಬಾಳುವ ಬ್ಯಾಟರಿಗಳು ಈಗಾಗಲೇ ಕಳವಾಗಿದೆ.

ಬ್ಯಾಟರಿ ಕಳ್ಳತನದಿಂದ ಹೆದ್ದಾರಿಯ ಕಾಮಗಾರಿ ಕುಂಠಿತಗೊಳ್ಳುತ್ತಿದ್ದು, ಮುಗ್ರೋಡಿ ಕನ್ಸಟ್ರಕ್ಷನ್ ಸಂಸ್ಥೆಯ ವಾಹನಗಳ ಎಲ್ಲಾ ಕೆಲಸಗಳು ಮಂಗಳೂರಿನಲ್ಲಿ ನಡೆಯುತ್ತಿದೆ. ಬ್ಯಾಟರಿ ಕೂಡ ಮಂಗಳೂರಿನಿಂದ ಪೂರೈಕೆಯಾಗುತ್ತದೆ. ಹೀಗಾಗಿ ಬ್ಯಾಟರಿ ಇಲ್ಲದೆ ಹಿಟ್ಯಾಚಿಗಳು ಕೆಲಸ ಮಾಡಲು ಆಗುತ್ತಿಲ್ಲ. ಬ್ಯಾಟರಿ ಬರುವವರೆಗೆ ಕಾಮಗಾರಿ ಸ್ಥಗಿತಗೊಳ್ಳುತ್ತಿದೆ.

ಈ ಬಗ್ಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Related posts

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗಿ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಗೌಡರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ, ಆರ್ಥಿಕ ನೆರವು

Suddi Udaya

ಉಜಿರೆ: ಮುಂಡತ್ತೋಡಿ – ಪೆರ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್, ಕೊಡೆ ವಿತರಣೆ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya
error: Content is protected !!