23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

ಬೆಳ್ತಂಗಡಿ : ವೇಣೂರು ವಲಯ ಅರಣ್ಯ ವ್ಯಾಪ್ತಿಯ ಚೆನ್ನೈತೋಡಿ, ಅಜ್ಜಿಬೆಟ್ಟು, ಎಲಿಯನಡುಗೋಡು, ಕುಕ್ಕಿಪಾಡಿ ಗ್ರಾಮಗಳ ವಿವಿಧ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಅಲ್ಲಲ್ಲಿ ಸಾರ್ವಜನಿಕರಿಗೆ ಕಂಡುಬರುತ್ತಿರುವ ಕಾರಣ ತುಳುನಾಡ ರಕ್ಷಣ ವೇದಿಕೆ ವಾಮದಪದವು ಘಟಕದ ವತಿಯಿಂದ ಅರಣ್ಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಮಾಲೋಚನ ಸಭೆಯನ್ನು 2024 ಡಿ.30 ರಂದು ನಡೆಸಿದ್ದು ಚಿರತೆಯನ್ನು ಸೆರೆಹಿಡಿಯಲು ಬೋನು ಅಳವಡಿಸಲು ತೀರ್ಮಾನಿಸಲಾಯಿತು.

ಪ್ರಸ್ತುತ ಚಿರತೆಯ ಓಡಾಟ ಹೆಚ್ಚಾಗಿ ಕಂಡುಬಂದಿರುವ ಚೆನ್ನೈತೋಡಿ ಗ್ರಾಮದ ಚೆನ್ನೈತೋಡಿ ಗುತ್ತು , ಗೋಂಜಗುತ್ತು ಹಾಗೂ ಎಲಿಯನಡುಗೋಡು ಗ್ರಾಮದ ಕುತ್ಲೋಡಿ ಎಂಬಲ್ಲಿ ಒಟ್ಟು ಮೂರು ಜಾಗಗಳಲ್ಲಿ ಸದ್ಯ ಅರಣ್ಯ ಇಲಾಖೆಯ ವತಿಯಿಂದ ಜ.3 ರಂದು ಬೋನು ಅಳವಡಿಸಿದ್ದು ಸಾರ್ವಜನಿಕರು ಹಾಗೂ ವೇಣೂರು ಅರಣ್ಯ ಇಲಾಖೆಯ ವತಿಯಿಂದ ಪ್ರತಿನಿತ್ಯ ನಿಗಾ ವಹಿಸಲಾಗುತ್ತಿದೆ.

ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಮಣ್ಯ ಆಚಾರಿಯವರ ನಿರ್ದೇಶನದಂತೆ ವೇಣೂರು ಶಾಖೆ ಉಪವಲಯ ಅರಣ್ಯ ಅಧಿಕಾರಿ ಸುನಿಲ್ ಕುಮಾರ್, ವಿಶೇಷ ಕರ್ತವ್ಯ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಗಸ್ತು ಅರಣ್ಯ ಪಾಲಕ ಸುರೇಶ್, ಅರಣ್ಯ ವೀಕ್ಷಕರಾದ ಸುಖೇಶ್, ಸಂತೋಷ್, ಕರಾವಳಿ ರಕ್ಷಣಾ ವೇದಿಕೆಯ ಅಧ್ಯಕ್ಷ ಜಯಪ್ರಕಾಶ ಶೆಟ್ಟಿ , ಸಾರ್ವಜನಿಕರಾದ ನಾರಾಯಣ ಸೇವಂತ, ಜನಾರ್ಧನ ಪೂಜಾರಿ, ಸುರೇಶ, ಪ್ರಮೋದ್ ಜೊತೆಯಲ್ಲಿದ್ದರು.

ಬೆಳ್ತಂಗಡಿಯ ಅಗ್ನಿಶಾಮಕ ದಳದ ಅಧಿಕಾರಿ ಉಸ್ಮಾನ್ ಮಾಹಿತಿ ನೀಡಿದರು.

Related posts

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya
error: Content is protected !!