23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

ಬೆಳ್ತಂಗಡಿ : ವೇಣೂರು ವಲಯ ಅರಣ್ಯ ವ್ಯಾಪ್ತಿಯ ಚೆನ್ನೈತೋಡಿ, ಅಜ್ಜಿಬೆಟ್ಟು, ಎಲಿಯನಡುಗೋಡು, ಕುಕ್ಕಿಪಾಡಿ ಗ್ರಾಮಗಳ ವಿವಿಧ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಅಲ್ಲಲ್ಲಿ ಸಾರ್ವಜನಿಕರಿಗೆ ಕಂಡುಬರುತ್ತಿರುವ ಕಾರಣ ತುಳುನಾಡ ರಕ್ಷಣ ವೇದಿಕೆ ವಾಮದಪದವು ಘಟಕದ ವತಿಯಿಂದ ಅರಣ್ಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಮಾಲೋಚನ ಸಭೆಯನ್ನು 2024 ಡಿ.30 ರಂದು ನಡೆಸಿದ್ದು ಚಿರತೆಯನ್ನು ಸೆರೆಹಿಡಿಯಲು ಬೋನು ಅಳವಡಿಸಲು ತೀರ್ಮಾನಿಸಲಾಯಿತು.

ಪ್ರಸ್ತುತ ಚಿರತೆಯ ಓಡಾಟ ಹೆಚ್ಚಾಗಿ ಕಂಡುಬಂದಿರುವ ಚೆನ್ನೈತೋಡಿ ಗ್ರಾಮದ ಚೆನ್ನೈತೋಡಿ ಗುತ್ತು , ಗೋಂಜಗುತ್ತು ಹಾಗೂ ಎಲಿಯನಡುಗೋಡು ಗ್ರಾಮದ ಕುತ್ಲೋಡಿ ಎಂಬಲ್ಲಿ ಒಟ್ಟು ಮೂರು ಜಾಗಗಳಲ್ಲಿ ಸದ್ಯ ಅರಣ್ಯ ಇಲಾಖೆಯ ವತಿಯಿಂದ ಜ.3 ರಂದು ಬೋನು ಅಳವಡಿಸಿದ್ದು ಸಾರ್ವಜನಿಕರು ಹಾಗೂ ವೇಣೂರು ಅರಣ್ಯ ಇಲಾಖೆಯ ವತಿಯಿಂದ ಪ್ರತಿನಿತ್ಯ ನಿಗಾ ವಹಿಸಲಾಗುತ್ತಿದೆ.

ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಮಣ್ಯ ಆಚಾರಿಯವರ ನಿರ್ದೇಶನದಂತೆ ವೇಣೂರು ಶಾಖೆ ಉಪವಲಯ ಅರಣ್ಯ ಅಧಿಕಾರಿ ಸುನಿಲ್ ಕುಮಾರ್, ವಿಶೇಷ ಕರ್ತವ್ಯ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಗಸ್ತು ಅರಣ್ಯ ಪಾಲಕ ಸುರೇಶ್, ಅರಣ್ಯ ವೀಕ್ಷಕರಾದ ಸುಖೇಶ್, ಸಂತೋಷ್, ಕರಾವಳಿ ರಕ್ಷಣಾ ವೇದಿಕೆಯ ಅಧ್ಯಕ್ಷ ಜಯಪ್ರಕಾಶ ಶೆಟ್ಟಿ , ಸಾರ್ವಜನಿಕರಾದ ನಾರಾಯಣ ಸೇವಂತ, ಜನಾರ್ಧನ ಪೂಜಾರಿ, ಸುರೇಶ, ಪ್ರಮೋದ್ ಜೊತೆಯಲ್ಲಿದ್ದರು.

ಬೆಳ್ತಂಗಡಿಯ ಅಗ್ನಿಶಾಮಕ ದಳದ ಅಧಿಕಾರಿ ಉಸ್ಮಾನ್ ಮಾಹಿತಿ ನೀಡಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ನಕಲಿ ಚಿನ್ನದ ಹಾವಳಿ ತಡೆಗೆ ಶಾಸಕರಿಗೆ ಮನವಿ

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya
error: Content is protected !!