September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

ಬೆಳ್ತಂಗಡಿ : ವೇಣೂರು ವಲಯ ಅರಣ್ಯ ವ್ಯಾಪ್ತಿಯ ಚೆನ್ನೈತೋಡಿ, ಅಜ್ಜಿಬೆಟ್ಟು, ಎಲಿಯನಡುಗೋಡು, ಕುಕ್ಕಿಪಾಡಿ ಗ್ರಾಮಗಳ ವಿವಿಧ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಅಲ್ಲಲ್ಲಿ ಸಾರ್ವಜನಿಕರಿಗೆ ಕಂಡುಬರುತ್ತಿರುವ ಕಾರಣ ತುಳುನಾಡ ರಕ್ಷಣ ವೇದಿಕೆ ವಾಮದಪದವು ಘಟಕದ ವತಿಯಿಂದ ಅರಣ್ಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಮಾಲೋಚನ ಸಭೆಯನ್ನು 2024 ಡಿ.30 ರಂದು ನಡೆಸಿದ್ದು ಚಿರತೆಯನ್ನು ಸೆರೆಹಿಡಿಯಲು ಬೋನು ಅಳವಡಿಸಲು ತೀರ್ಮಾನಿಸಲಾಯಿತು.

ಪ್ರಸ್ತುತ ಚಿರತೆಯ ಓಡಾಟ ಹೆಚ್ಚಾಗಿ ಕಂಡುಬಂದಿರುವ ಚೆನ್ನೈತೋಡಿ ಗ್ರಾಮದ ಚೆನ್ನೈತೋಡಿ ಗುತ್ತು , ಗೋಂಜಗುತ್ತು ಹಾಗೂ ಎಲಿಯನಡುಗೋಡು ಗ್ರಾಮದ ಕುತ್ಲೋಡಿ ಎಂಬಲ್ಲಿ ಒಟ್ಟು ಮೂರು ಜಾಗಗಳಲ್ಲಿ ಸದ್ಯ ಅರಣ್ಯ ಇಲಾಖೆಯ ವತಿಯಿಂದ ಜ.3 ರಂದು ಬೋನು ಅಳವಡಿಸಿದ್ದು ಸಾರ್ವಜನಿಕರು ಹಾಗೂ ವೇಣೂರು ಅರಣ್ಯ ಇಲಾಖೆಯ ವತಿಯಿಂದ ಪ್ರತಿನಿತ್ಯ ನಿಗಾ ವಹಿಸಲಾಗುತ್ತಿದೆ.

ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಮಣ್ಯ ಆಚಾರಿಯವರ ನಿರ್ದೇಶನದಂತೆ ವೇಣೂರು ಶಾಖೆ ಉಪವಲಯ ಅರಣ್ಯ ಅಧಿಕಾರಿ ಸುನಿಲ್ ಕುಮಾರ್, ವಿಶೇಷ ಕರ್ತವ್ಯ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಗಸ್ತು ಅರಣ್ಯ ಪಾಲಕ ಸುರೇಶ್, ಅರಣ್ಯ ವೀಕ್ಷಕರಾದ ಸುಖೇಶ್, ಸಂತೋಷ್, ಕರಾವಳಿ ರಕ್ಷಣಾ ವೇದಿಕೆಯ ಅಧ್ಯಕ್ಷ ಜಯಪ್ರಕಾಶ ಶೆಟ್ಟಿ , ಸಾರ್ವಜನಿಕರಾದ ನಾರಾಯಣ ಸೇವಂತ, ಜನಾರ್ಧನ ಪೂಜಾರಿ, ಸುರೇಶ, ಪ್ರಮೋದ್ ಜೊತೆಯಲ್ಲಿದ್ದರು.

ಬೆಳ್ತಂಗಡಿಯ ಅಗ್ನಿಶಾಮಕ ದಳದ ಅಧಿಕಾರಿ ಉಸ್ಮಾನ್ ಮಾಹಿತಿ ನೀಡಿದರು.

Related posts

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ತಣ್ಣೀರುಪಂತ: ಪಾಲೇದುವಿನ ಡಾ. ಸ್ವಾತಿಕ್‌ರಿಗೆ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!