23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

ಉಜಿರೆ : ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತುಕಾರಾಮ ಸಾಲಿಯಾನ್ ಆರ್ಲ ಡಿ. 31ರಂದು ಸೇವಾ ನಿವೃತ್ತಿ ಹೊಂದಿದರು.

ಕಲ್ಮಂಜ ಗ್ರಾಮದ ಆರ್ಲ ನಿವಾಸಿಯಾಗಿರುವ, ಬಿ.ಕಾಂ ಪದವೀಧರರಾಗಿರುವ ತುಕಾರಾಮ ಅವರು 1987ರಿಂದ 89ರವರೆಗೆ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ, 1991 ರಿಂದ ಸುಧೀರ್ಘ 33 ವರ್ಷಗಳ ಕಾಲ ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತರಾಗಿದ್ದಾರೆ.

ಕೃಷಿಕರಾಗಿರುವ ಇವರು ಸಾಮಾಜಿಕ, ಧಾರ್ಮಿಕ, ಸಹಕಾರ ಸಂಘಗಳಲ್ಲಿ ಸಕ್ರಿಯರಾಗಿದ್ದಾರೆ. ಶ್ರೀ ರಾಮ ಕ್ಷೇತ್ರದ ಟ್ರಸ್ಟಿಯಾಗಿ, ಪರಡ್ಡ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ, ಕಳೆದ 25 ವರ್ಷಗಳಿಂದ ಉಜಿರೆ ಮೂರ್ತೆದಾರ ಸಹಕಾರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವುದಲ್ಲದೆ, ಹವ್ಯಾಸಿ ಕಲಾವಿದರಾಗಿಯೂ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.

Related posts

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya
error: Content is protected !!