July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

ಉಜಿರೆ : ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತುಕಾರಾಮ ಸಾಲಿಯಾನ್ ಆರ್ಲ ಡಿ. 31ರಂದು ಸೇವಾ ನಿವೃತ್ತಿ ಹೊಂದಿದರು.

ಕಲ್ಮಂಜ ಗ್ರಾಮದ ಆರ್ಲ ನಿವಾಸಿಯಾಗಿರುವ, ಬಿ.ಕಾಂ ಪದವೀಧರರಾಗಿರುವ ತುಕಾರಾಮ ಅವರು 1987ರಿಂದ 89ರವರೆಗೆ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ, 1991 ರಿಂದ ಸುಧೀರ್ಘ 33 ವರ್ಷಗಳ ಕಾಲ ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತರಾಗಿದ್ದಾರೆ.

ಕೃಷಿಕರಾಗಿರುವ ಇವರು ಸಾಮಾಜಿಕ, ಧಾರ್ಮಿಕ, ಸಹಕಾರ ಸಂಘಗಳಲ್ಲಿ ಸಕ್ರಿಯರಾಗಿದ್ದಾರೆ. ಶ್ರೀ ರಾಮ ಕ್ಷೇತ್ರದ ಟ್ರಸ್ಟಿಯಾಗಿ, ಪರಡ್ಡ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ, ಕಳೆದ 25 ವರ್ಷಗಳಿಂದ ಉಜಿರೆ ಮೂರ್ತೆದಾರ ಸಹಕಾರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವುದಲ್ಲದೆ, ಹವ್ಯಾಸಿ ಕಲಾವಿದರಾಗಿಯೂ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.

Related posts

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya
error: Content is protected !!