23.6 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

ಬೆಳ್ತಂಗಡಿ : ಇಲ್ಲಿಯ ರಾಮನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಬೆಳ್ತಂಗಡಿ, ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಸುವರ್ಣ ದೀಪೋತ್ಸವವು ಜ.3 ರಿಂದ ಪ್ರಾರಂಭಗೊಂಡು ಜ.5 ರವರೆಗೆ ನಡೆಯಲಿದೆ.

ಇಂದು (ಜ.3) ಬೆಳಿಗ್ಗೆ ಗಣಹೋಮ, ಶ್ರೀ ಶಾಸ್ತರ ಸಹಸ್ತ ಕದಳಿಯಾಗ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು. ದೀಪೋತ್ಸವದ ಉದ್ಘಾಟನೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ ಶೆಟ್ಟಿ ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಶಿವಪ್ರಸಾದ್ ಅಜಿಲ ನೆರವೇರಿಸಿದರು.

ಈ ಸಂದರ್ಭದಲ್ಲಿ ಅಯ್ಯಪ್ಪ ದೀಪೋತ್ಸವ ಅಧ್ಯಕ್ಷ ನಾರಾಯಣ ಭಟ್ ಮುಗುಳಿ, ಟ್ರಸ್ಟಿನ ಅಧ್ಯಕ್ಷ ಶರತ್ ಕುಮಾರ್,
ಪ್ರಕಾಶ್ ಗುರು ಸ್ವಾಮಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


ದಿಪೋತ್ಸವ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಚಾರ ಸಮಿತಿಯ ಅಧ್ಯಕ್ಷ ತುಕಾರಾಂ ಧನ್ಯವಾದವಿತ್ತರು.

ನಂತರ ಮಧ್ಯಾಹ್ನ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ , ಸಂಜೆ 4 ಗಂಟೆಗೆ ಹೊರೆಕಾಣಿಕೆ ಮೆರವಣಿಗೆ (ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ) ರಾತ್ರಿ 8.30ಕ್ಕೆ ಧಾರ್ಮಿಕ ಸಭೆ ಹಾಗೂ ಮನರಂಜನಾ ಕಾರ್ಯಕ್ರಮ ನಡೆಯಲಿದೆ.

Related posts

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya
error: Content is protected !!