23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

ಬೆಳ್ತಂಗಡಿ : ಇಲ್ಲಿಯ ರಾಮನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಬೆಳ್ತಂಗಡಿ, ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಸುವರ್ಣ ದೀಪೋತ್ಸವವು ಜ.3 ರಿಂದ ಪ್ರಾರಂಭಗೊಂಡು ಜ.5 ರವರೆಗೆ ನಡೆಯಲಿದೆ.

ಇಂದು (ಜ.3) ಬೆಳಿಗ್ಗೆ ಗಣಹೋಮ, ಶ್ರೀ ಶಾಸ್ತರ ಸಹಸ್ತ ಕದಳಿಯಾಗ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು. ದೀಪೋತ್ಸವದ ಉದ್ಘಾಟನೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ ಶೆಟ್ಟಿ ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಶಿವಪ್ರಸಾದ್ ಅಜಿಲ ನೆರವೇರಿಸಿದರು.

ಈ ಸಂದರ್ಭದಲ್ಲಿ ಅಯ್ಯಪ್ಪ ದೀಪೋತ್ಸವ ಅಧ್ಯಕ್ಷ ನಾರಾಯಣ ಭಟ್ ಮುಗುಳಿ, ಟ್ರಸ್ಟಿನ ಅಧ್ಯಕ್ಷ ಶರತ್ ಕುಮಾರ್,
ಪ್ರಕಾಶ್ ಗುರು ಸ್ವಾಮಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


ದಿಪೋತ್ಸವ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಚಾರ ಸಮಿತಿಯ ಅಧ್ಯಕ್ಷ ತುಕಾರಾಂ ಧನ್ಯವಾದವಿತ್ತರು.

ನಂತರ ಮಧ್ಯಾಹ್ನ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ , ಸಂಜೆ 4 ಗಂಟೆಗೆ ಹೊರೆಕಾಣಿಕೆ ಮೆರವಣಿಗೆ (ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ) ರಾತ್ರಿ 8.30ಕ್ಕೆ ಧಾರ್ಮಿಕ ಸಭೆ ಹಾಗೂ ಮನರಂಜನಾ ಕಾರ್ಯಕ್ರಮ ನಡೆಯಲಿದೆ.

Related posts

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya
error: Content is protected !!