24.7 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

ಬೆಳ್ತಂಗಡಿ : ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಕಾಮಗಾರಿ ಮುಗ್ರೋಡಿ ಕನ್ಸಟ್ರಕ್ಷನ್ ತೆಕ್ಕೆಗೆ ಬಂದ ನಂತರ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಅಲ್ಲಲ್ಲಿ ನಿಲ್ಲಿಸಿದ್ದ ಮುಗ್ರೋಡಿ ಕನ್ಸೆಕ್ಷನ್ ಸೇರಿದ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಗಳನ್ನು ಕಳವು ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಹೆದ್ದಾರಿಯ ಕಾಮಗಾರಿ ನಡೆಸಲು ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ಬಳಕೆ ಮಾಡಲಾಗುತ್ತಿದ್ದು, ದಿನದ ಕೆಲಸದ ನಂತರ ಈ ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಲಾಗುತ್ತಿದೆ. ಆದರೆ ಕಳ್ಳರು ಹಿಟ್ಯಾಚಿಗಳ ಬ್ಯಾಟರಿ ಮತ್ತು ಡೀಸೆಲ್ ಗೆ ಕನ್ನ ಹಾಕುತ್ತಿದ್ದಾರೆ.

ಹಿಟ್ಯಾಚಿಗಳಿಂದ ಸರಿ ಸುಮಾರು 20 ಬ್ಯಾಟರಿಗಳನ್ನು ಕಳ್ಳರು ಎಗರಿಸಿದ್ದಾರೆ. ರಾತ್ರಿ ಸಮಯದಲ್ಲಿ ಬರುವ ಕಳ್ಳರು ಬ್ಯಾಟರಿಗಳನ್ನು ಕದ್ದುಕೊಂಡು ಹೋಗುತ್ತಿದ್ದಾರೆ. ಸರಿ ಸುಮಾರು ಲಕ್ಷ ಬೆಲೆಬಾಳುವ ಬ್ಯಾಟರಿಗಳು ಈಗಾಗಲೇ ಕಳವಾಗಿದೆ.

ಬ್ಯಾಟರಿ ಕಳ್ಳತನದಿಂದ ಹೆದ್ದಾರಿಯ ಕಾಮಗಾರಿ ಕುಂಠಿತಗೊಳ್ಳುತ್ತಿದ್ದು, ಮುಗ್ರೋಡಿ ಕನ್ಸಟ್ರಕ್ಷನ್ ಸಂಸ್ಥೆಯ ವಾಹನಗಳ ಎಲ್ಲಾ ಕೆಲಸಗಳು ಮಂಗಳೂರಿನಲ್ಲಿ ನಡೆಯುತ್ತಿದೆ. ಬ್ಯಾಟರಿ ಕೂಡ ಮಂಗಳೂರಿನಿಂದ ಪೂರೈಕೆಯಾಗುತ್ತದೆ. ಹೀಗಾಗಿ ಬ್ಯಾಟರಿ ಇಲ್ಲದೆ ಹಿಟ್ಯಾಚಿಗಳು ಕೆಲಸ ಮಾಡಲು ಆಗುತ್ತಿಲ್ಲ. ಬ್ಯಾಟರಿ ಬರುವವರೆಗೆ ಕಾಮಗಾರಿ ಸ್ಥಗಿತಗೊಳ್ಳುತ್ತಿದೆ.

ಈ ಬಗ್ಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Related posts

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಗ್ರಾ.ಪಂ. ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ಬೆಂಗಳೂರುನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

Suddi Udaya
error: Content is protected !!