23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

ಬೆಳ್ತಂಗಡಿ : ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಕಾಮಗಾರಿ ಮುಗ್ರೋಡಿ ಕನ್ಸಟ್ರಕ್ಷನ್ ತೆಕ್ಕೆಗೆ ಬಂದ ನಂತರ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಅಲ್ಲಲ್ಲಿ ನಿಲ್ಲಿಸಿದ್ದ ಮುಗ್ರೋಡಿ ಕನ್ಸೆಕ್ಷನ್ ಸೇರಿದ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಗಳನ್ನು ಕಳವು ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಹೆದ್ದಾರಿಯ ಕಾಮಗಾರಿ ನಡೆಸಲು ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ಬಳಕೆ ಮಾಡಲಾಗುತ್ತಿದ್ದು, ದಿನದ ಕೆಲಸದ ನಂತರ ಈ ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಲಾಗುತ್ತಿದೆ. ಆದರೆ ಕಳ್ಳರು ಹಿಟ್ಯಾಚಿಗಳ ಬ್ಯಾಟರಿ ಮತ್ತು ಡೀಸೆಲ್ ಗೆ ಕನ್ನ ಹಾಕುತ್ತಿದ್ದಾರೆ.

ಹಿಟ್ಯಾಚಿಗಳಿಂದ ಸರಿ ಸುಮಾರು 20 ಬ್ಯಾಟರಿಗಳನ್ನು ಕಳ್ಳರು ಎಗರಿಸಿದ್ದಾರೆ. ರಾತ್ರಿ ಸಮಯದಲ್ಲಿ ಬರುವ ಕಳ್ಳರು ಬ್ಯಾಟರಿಗಳನ್ನು ಕದ್ದುಕೊಂಡು ಹೋಗುತ್ತಿದ್ದಾರೆ. ಸರಿ ಸುಮಾರು ಲಕ್ಷ ಬೆಲೆಬಾಳುವ ಬ್ಯಾಟರಿಗಳು ಈಗಾಗಲೇ ಕಳವಾಗಿದೆ.

ಬ್ಯಾಟರಿ ಕಳ್ಳತನದಿಂದ ಹೆದ್ದಾರಿಯ ಕಾಮಗಾರಿ ಕುಂಠಿತಗೊಳ್ಳುತ್ತಿದ್ದು, ಮುಗ್ರೋಡಿ ಕನ್ಸಟ್ರಕ್ಷನ್ ಸಂಸ್ಥೆಯ ವಾಹನಗಳ ಎಲ್ಲಾ ಕೆಲಸಗಳು ಮಂಗಳೂರಿನಲ್ಲಿ ನಡೆಯುತ್ತಿದೆ. ಬ್ಯಾಟರಿ ಕೂಡ ಮಂಗಳೂರಿನಿಂದ ಪೂರೈಕೆಯಾಗುತ್ತದೆ. ಹೀಗಾಗಿ ಬ್ಯಾಟರಿ ಇಲ್ಲದೆ ಹಿಟ್ಯಾಚಿಗಳು ಕೆಲಸ ಮಾಡಲು ಆಗುತ್ತಿಲ್ಲ. ಬ್ಯಾಟರಿ ಬರುವವರೆಗೆ ಕಾಮಗಾರಿ ಸ್ಥಗಿತಗೊಳ್ಳುತ್ತಿದೆ.

ಈ ಬಗ್ಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Related posts

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜು :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

Suddi Udaya
error: Content is protected !!