September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

ಬೆಳ್ತಂಗಡಿ : ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಕಾಮಗಾರಿ ಮುಗ್ರೋಡಿ ಕನ್ಸಟ್ರಕ್ಷನ್ ತೆಕ್ಕೆಗೆ ಬಂದ ನಂತರ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಅಲ್ಲಲ್ಲಿ ನಿಲ್ಲಿಸಿದ್ದ ಮುಗ್ರೋಡಿ ಕನ್ಸೆಕ್ಷನ್ ಸೇರಿದ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಗಳನ್ನು ಕಳವು ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಹೆದ್ದಾರಿಯ ಕಾಮಗಾರಿ ನಡೆಸಲು ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ಬಳಕೆ ಮಾಡಲಾಗುತ್ತಿದ್ದು, ದಿನದ ಕೆಲಸದ ನಂತರ ಈ ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಲಾಗುತ್ತಿದೆ. ಆದರೆ ಕಳ್ಳರು ಹಿಟ್ಯಾಚಿಗಳ ಬ್ಯಾಟರಿ ಮತ್ತು ಡೀಸೆಲ್ ಗೆ ಕನ್ನ ಹಾಕುತ್ತಿದ್ದಾರೆ.

ಹಿಟ್ಯಾಚಿಗಳಿಂದ ಸರಿ ಸುಮಾರು 20 ಬ್ಯಾಟರಿಗಳನ್ನು ಕಳ್ಳರು ಎಗರಿಸಿದ್ದಾರೆ. ರಾತ್ರಿ ಸಮಯದಲ್ಲಿ ಬರುವ ಕಳ್ಳರು ಬ್ಯಾಟರಿಗಳನ್ನು ಕದ್ದುಕೊಂಡು ಹೋಗುತ್ತಿದ್ದಾರೆ. ಸರಿ ಸುಮಾರು ಲಕ್ಷ ಬೆಲೆಬಾಳುವ ಬ್ಯಾಟರಿಗಳು ಈಗಾಗಲೇ ಕಳವಾಗಿದೆ.

ಬ್ಯಾಟರಿ ಕಳ್ಳತನದಿಂದ ಹೆದ್ದಾರಿಯ ಕಾಮಗಾರಿ ಕುಂಠಿತಗೊಳ್ಳುತ್ತಿದ್ದು, ಮುಗ್ರೋಡಿ ಕನ್ಸಟ್ರಕ್ಷನ್ ಸಂಸ್ಥೆಯ ವಾಹನಗಳ ಎಲ್ಲಾ ಕೆಲಸಗಳು ಮಂಗಳೂರಿನಲ್ಲಿ ನಡೆಯುತ್ತಿದೆ. ಬ್ಯಾಟರಿ ಕೂಡ ಮಂಗಳೂರಿನಿಂದ ಪೂರೈಕೆಯಾಗುತ್ತದೆ. ಹೀಗಾಗಿ ಬ್ಯಾಟರಿ ಇಲ್ಲದೆ ಹಿಟ್ಯಾಚಿಗಳು ಕೆಲಸ ಮಾಡಲು ಆಗುತ್ತಿಲ್ಲ. ಬ್ಯಾಟರಿ ಬರುವವರೆಗೆ ಕಾಮಗಾರಿ ಸ್ಥಗಿತಗೊಳ್ಳುತ್ತಿದೆ.

ಈ ಬಗ್ಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಣಿ-ವಿಕಸಿತ ಭಾರತ ಸಂಕಲ್ಪ ಸಭೆ

Suddi Udaya
error: Content is protected !!