23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

ಬೆಳ್ತಂಗಡಿ : ವೇಣೂರು ವಲಯ ಅರಣ್ಯ ವ್ಯಾಪ್ತಿಯ ಚೆನ್ನೈತೋಡಿ, ಅಜ್ಜಿಬೆಟ್ಟು, ಎಲಿಯನಡುಗೋಡು, ಕುಕ್ಕಿಪಾಡಿ ಗ್ರಾಮಗಳ ವಿವಿಧ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಅಲ್ಲಲ್ಲಿ ಸಾರ್ವಜನಿಕರಿಗೆ ಕಂಡುಬರುತ್ತಿರುವ ಕಾರಣ ತುಳುನಾಡ ರಕ್ಷಣ ವೇದಿಕೆ ವಾಮದಪದವು ಘಟಕದ ವತಿಯಿಂದ ಅರಣ್ಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಮಾಲೋಚನ ಸಭೆಯನ್ನು 2024 ಡಿ.30 ರಂದು ನಡೆಸಿದ್ದು ಚಿರತೆಯನ್ನು ಸೆರೆಹಿಡಿಯಲು ಬೋನು ಅಳವಡಿಸಲು ತೀರ್ಮಾನಿಸಲಾಯಿತು.

ಪ್ರಸ್ತುತ ಚಿರತೆಯ ಓಡಾಟ ಹೆಚ್ಚಾಗಿ ಕಂಡುಬಂದಿರುವ ಚೆನ್ನೈತೋಡಿ ಗ್ರಾಮದ ಚೆನ್ನೈತೋಡಿ ಗುತ್ತು , ಗೋಂಜಗುತ್ತು ಹಾಗೂ ಎಲಿಯನಡುಗೋಡು ಗ್ರಾಮದ ಕುತ್ಲೋಡಿ ಎಂಬಲ್ಲಿ ಒಟ್ಟು ಮೂರು ಜಾಗಗಳಲ್ಲಿ ಸದ್ಯ ಅರಣ್ಯ ಇಲಾಖೆಯ ವತಿಯಿಂದ ಜ.3 ರಂದು ಬೋನು ಅಳವಡಿಸಿದ್ದು ಸಾರ್ವಜನಿಕರು ಹಾಗೂ ವೇಣೂರು ಅರಣ್ಯ ಇಲಾಖೆಯ ವತಿಯಿಂದ ಪ್ರತಿನಿತ್ಯ ನಿಗಾ ವಹಿಸಲಾಗುತ್ತಿದೆ.

ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಮಣ್ಯ ಆಚಾರಿಯವರ ನಿರ್ದೇಶನದಂತೆ ವೇಣೂರು ಶಾಖೆ ಉಪವಲಯ ಅರಣ್ಯ ಅಧಿಕಾರಿ ಸುನಿಲ್ ಕುಮಾರ್, ವಿಶೇಷ ಕರ್ತವ್ಯ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಗಸ್ತು ಅರಣ್ಯ ಪಾಲಕ ಸುರೇಶ್, ಅರಣ್ಯ ವೀಕ್ಷಕರಾದ ಸುಖೇಶ್, ಸಂತೋಷ್, ಕರಾವಳಿ ರಕ್ಷಣಾ ವೇದಿಕೆಯ ಅಧ್ಯಕ್ಷ ಜಯಪ್ರಕಾಶ ಶೆಟ್ಟಿ , ಸಾರ್ವಜನಿಕರಾದ ನಾರಾಯಣ ಸೇವಂತ, ಜನಾರ್ಧನ ಪೂಜಾರಿ, ಸುರೇಶ, ಪ್ರಮೋದ್ ಜೊತೆಯಲ್ಲಿದ್ದರು.

ಬೆಳ್ತಂಗಡಿಯ ಅಗ್ನಿಶಾಮಕ ದಳದ ಅಧಿಕಾರಿ ಉಸ್ಮಾನ್ ಮಾಹಿತಿ ನೀಡಿದರು.

Related posts

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya
error: Content is protected !!