July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

ಬೆಳ್ತಂಗಡಿ : ವೇಣೂರು ವಲಯ ಅರಣ್ಯ ವ್ಯಾಪ್ತಿಯ ಚೆನ್ನೈತೋಡಿ, ಅಜ್ಜಿಬೆಟ್ಟು, ಎಲಿಯನಡುಗೋಡು, ಕುಕ್ಕಿಪಾಡಿ ಗ್ರಾಮಗಳ ವಿವಿಧ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಅಲ್ಲಲ್ಲಿ ಸಾರ್ವಜನಿಕರಿಗೆ ಕಂಡುಬರುತ್ತಿರುವ ಕಾರಣ ತುಳುನಾಡ ರಕ್ಷಣ ವೇದಿಕೆ ವಾಮದಪದವು ಘಟಕದ ವತಿಯಿಂದ ಅರಣ್ಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಮಾಲೋಚನ ಸಭೆಯನ್ನು 2024 ಡಿ.30 ರಂದು ನಡೆಸಿದ್ದು ಚಿರತೆಯನ್ನು ಸೆರೆಹಿಡಿಯಲು ಬೋನು ಅಳವಡಿಸಲು ತೀರ್ಮಾನಿಸಲಾಯಿತು.

ಪ್ರಸ್ತುತ ಚಿರತೆಯ ಓಡಾಟ ಹೆಚ್ಚಾಗಿ ಕಂಡುಬಂದಿರುವ ಚೆನ್ನೈತೋಡಿ ಗ್ರಾಮದ ಚೆನ್ನೈತೋಡಿ ಗುತ್ತು , ಗೋಂಜಗುತ್ತು ಹಾಗೂ ಎಲಿಯನಡುಗೋಡು ಗ್ರಾಮದ ಕುತ್ಲೋಡಿ ಎಂಬಲ್ಲಿ ಒಟ್ಟು ಮೂರು ಜಾಗಗಳಲ್ಲಿ ಸದ್ಯ ಅರಣ್ಯ ಇಲಾಖೆಯ ವತಿಯಿಂದ ಜ.3 ರಂದು ಬೋನು ಅಳವಡಿಸಿದ್ದು ಸಾರ್ವಜನಿಕರು ಹಾಗೂ ವೇಣೂರು ಅರಣ್ಯ ಇಲಾಖೆಯ ವತಿಯಿಂದ ಪ್ರತಿನಿತ್ಯ ನಿಗಾ ವಹಿಸಲಾಗುತ್ತಿದೆ.

ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಮಣ್ಯ ಆಚಾರಿಯವರ ನಿರ್ದೇಶನದಂತೆ ವೇಣೂರು ಶಾಖೆ ಉಪವಲಯ ಅರಣ್ಯ ಅಧಿಕಾರಿ ಸುನಿಲ್ ಕುಮಾರ್, ವಿಶೇಷ ಕರ್ತವ್ಯ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಗಸ್ತು ಅರಣ್ಯ ಪಾಲಕ ಸುರೇಶ್, ಅರಣ್ಯ ವೀಕ್ಷಕರಾದ ಸುಖೇಶ್, ಸಂತೋಷ್, ಕರಾವಳಿ ರಕ್ಷಣಾ ವೇದಿಕೆಯ ಅಧ್ಯಕ್ಷ ಜಯಪ್ರಕಾಶ ಶೆಟ್ಟಿ , ಸಾರ್ವಜನಿಕರಾದ ನಾರಾಯಣ ಸೇವಂತ, ಜನಾರ್ಧನ ಪೂಜಾರಿ, ಸುರೇಶ, ಪ್ರಮೋದ್ ಜೊತೆಯಲ್ಲಿದ್ದರು.

ಬೆಳ್ತಂಗಡಿಯ ಅಗ್ನಿಶಾಮಕ ದಳದ ಅಧಿಕಾರಿ ಉಸ್ಮಾನ್ ಮಾಹಿತಿ ನೀಡಿದರು.

Related posts

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ಉಜಿರೆ: ರೇಡಿಯೋ‌ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ‌ ಬ್ಯಾರಿ‌ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ

Suddi Udaya
error: Content is protected !!