July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

ಉಜಿರೆ: ಉಜಿರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆಯನ್ನು ಗ್ರಾಪಂ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.


ಪಿಡಿಒ ಪ್ರಕಾಶ್ ಶೆಟ್ಟಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಮತ್ತು ಹೊಟೇಲ್ ಗಳ ಕೊಳಚೆ ನೀರಿನಿಂದಾಗಿ ಕೆಲವರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಇದಕ್ಕೆ ಯಾವ ರೀತಿಯಾಗಿ ನಿರ್ವಹಣೆಯನ್ನು ಮಾಡಬಹುದು ಎಂಬ ಅಭಿಪ್ರಾಯವನ್ನು ಸಭೆಯಲ್ಲಿ ತಿಳಿಸಿದರು.


ಸಭೆಯಲ್ಲಿ ಏಕ ಬಳಕೆ ಮುಕ್ತ ಗ್ರಾಮ ಮಾಡುವ ಬಗ್ಗೆ ಗ್ರಾಮ ಎಲ್ಲಾ ವರ್ತಕರಿಗೆ ಮತ್ತು ಅಂಗಡಿ ಮಾಲೀಕರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಕರಪತ್ರ ಹಂಚಿ ಎಲ್ಲಾ ಅಂಗಡಿ ಮಾಲೀಕರು ಇದರೊಂದಿಗೆ ಕೈಜೋಡಿಸುವ ಬಗ್ಗೆ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಯಿತು. ಉಜಿರೆ ಗ್ರಾಮದಲ್ಲಿ ಮತ್ತೊಂದು ಪ್ರಮುಖ ಸಮಸ್ಯೆ ಅಂದರೆ ಕೊಳಚೆ ನೀರು ಇದನ್ನು ಸರಿಯಾಗಿ ನಿರ್ವಹಣೆ ಮಾಡದಿದ್ದರೆ ಮುಂದೊಂದು ದಿನ ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾದಿತು ಎಂಬ ವಿಷಯದ ಬಗ್ಗೆ ಚರ್ಚಿಸಿ ಇದರ ಬಗ್ಗೆ ಎಲ್ಲಾ ಹೋಟೆಲ್ ಮಾಲೀಕರು ಸೇರಿ ಸೂಕ್ತವಾದ ವ್ಯವಸ್ಥೆಯನ್ನು ಮಾಡುವ ಬಗ್ಗೆ ನಿರ್ಣಯವನ್ನು ಕೈಗೊಳ್ಳಲಾಯಿತು.


ತ್ಯಾಜ್ಯ ವಿಲೇವಾರಿ ಬಗ್ಗೆ ಕೂಡ ಗ್ರಾಮ ಪಂಚಾಯತಿಯೊಂದಿಗೆ ಸಹಕರಿಸಬೇಕೆಂದು ಎಲ್ಲಾ ವರ್ತಕರು ಹಾಗೂ ಅಂಗಡಿ ಮಾಲಕರೊಂದಿಗೆ ಗ್ರಾಮ ಪಂಚಾಯಿತಿ ವತಿಯಿಂದ ವಿನಂತಿಯನ್ನು ಮಾಡಲಾಯಿತು. ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್,ಉದ್ಯಮಿಗಳಾದ ಮೋಹನ್ ಕುಮಾರ್, ರಾಜೇಶ್ ಪೈ ಮತ್ತಿತರರು ಉಪಸ್ಥಿತರಿದ್ದರು.

Related posts

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆ ವತಿಯಿಂದ ಮುಂಡೂರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

Suddi Udaya

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Suddi Udaya

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!