September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

ಬೆಳ್ತಂಗಡಿ : ಇಲ್ಲಿಯ ರಾಮನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಬೆಳ್ತಂಗಡಿ, ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಸುವರ್ಣ ದೀಪೋತ್ಸವವು ಜ.3 ರಿಂದ ಪ್ರಾರಂಭಗೊಂಡು ಜ.5 ರವರೆಗೆ ನಡೆಯಲಿದೆ.

ಇಂದು (ಜ.3) ಬೆಳಿಗ್ಗೆ ಗಣಹೋಮ, ಶ್ರೀ ಶಾಸ್ತರ ಸಹಸ್ತ ಕದಳಿಯಾಗ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು. ದೀಪೋತ್ಸವದ ಉದ್ಘಾಟನೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ ಶೆಟ್ಟಿ ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಶಿವಪ್ರಸಾದ್ ಅಜಿಲ ನೆರವೇರಿಸಿದರು.

ಈ ಸಂದರ್ಭದಲ್ಲಿ ಅಯ್ಯಪ್ಪ ದೀಪೋತ್ಸವ ಅಧ್ಯಕ್ಷ ನಾರಾಯಣ ಭಟ್ ಮುಗುಳಿ, ಟ್ರಸ್ಟಿನ ಅಧ್ಯಕ್ಷ ಶರತ್ ಕುಮಾರ್,
ಪ್ರಕಾಶ್ ಗುರು ಸ್ವಾಮಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


ದಿಪೋತ್ಸವ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಚಾರ ಸಮಿತಿಯ ಅಧ್ಯಕ್ಷ ತುಕಾರಾಂ ಧನ್ಯವಾದವಿತ್ತರು.

ನಂತರ ಮಧ್ಯಾಹ್ನ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ , ಸಂಜೆ 4 ಗಂಟೆಗೆ ಹೊರೆಕಾಣಿಕೆ ಮೆರವಣಿಗೆ (ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ) ರಾತ್ರಿ 8.30ಕ್ಕೆ ಧಾರ್ಮಿಕ ಸಭೆ ಹಾಗೂ ಮನರಂಜನಾ ಕಾರ್ಯಕ್ರಮ ನಡೆಯಲಿದೆ.

Related posts

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya
error: Content is protected !!