25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

ಬೆಳ್ತಂಗಡಿ : ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಕಾಮಗಾರಿ ಮುಗ್ರೋಡಿ ಕನ್ಸಟ್ರಕ್ಷನ್ ತೆಕ್ಕೆಗೆ ಬಂದ ನಂತರ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಅಲ್ಲಲ್ಲಿ ನಿಲ್ಲಿಸಿದ್ದ ಮುಗ್ರೋಡಿ ಕನ್ಸೆಕ್ಷನ್ ಸೇರಿದ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಗಳನ್ನು ಕಳವು ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಹೆದ್ದಾರಿಯ ಕಾಮಗಾರಿ ನಡೆಸಲು ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ಬಳಕೆ ಮಾಡಲಾಗುತ್ತಿದ್ದು, ದಿನದ ಕೆಲಸದ ನಂತರ ಈ ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಲಾಗುತ್ತಿದೆ. ಆದರೆ ಕಳ್ಳರು ಹಿಟ್ಯಾಚಿಗಳ ಬ್ಯಾಟರಿ ಮತ್ತು ಡೀಸೆಲ್ ಗೆ ಕನ್ನ ಹಾಕುತ್ತಿದ್ದಾರೆ.

ಹಿಟ್ಯಾಚಿಗಳಿಂದ ಸರಿ ಸುಮಾರು 20 ಬ್ಯಾಟರಿಗಳನ್ನು ಕಳ್ಳರು ಎಗರಿಸಿದ್ದಾರೆ. ರಾತ್ರಿ ಸಮಯದಲ್ಲಿ ಬರುವ ಕಳ್ಳರು ಬ್ಯಾಟರಿಗಳನ್ನು ಕದ್ದುಕೊಂಡು ಹೋಗುತ್ತಿದ್ದಾರೆ. ಸರಿ ಸುಮಾರು ಲಕ್ಷ ಬೆಲೆಬಾಳುವ ಬ್ಯಾಟರಿಗಳು ಈಗಾಗಲೇ ಕಳವಾಗಿದೆ.

ಬ್ಯಾಟರಿ ಕಳ್ಳತನದಿಂದ ಹೆದ್ದಾರಿಯ ಕಾಮಗಾರಿ ಕುಂಠಿತಗೊಳ್ಳುತ್ತಿದ್ದು, ಮುಗ್ರೋಡಿ ಕನ್ಸಟ್ರಕ್ಷನ್ ಸಂಸ್ಥೆಯ ವಾಹನಗಳ ಎಲ್ಲಾ ಕೆಲಸಗಳು ಮಂಗಳೂರಿನಲ್ಲಿ ನಡೆಯುತ್ತಿದೆ. ಬ್ಯಾಟರಿ ಕೂಡ ಮಂಗಳೂರಿನಿಂದ ಪೂರೈಕೆಯಾಗುತ್ತದೆ. ಹೀಗಾಗಿ ಬ್ಯಾಟರಿ ಇಲ್ಲದೆ ಹಿಟ್ಯಾಚಿಗಳು ಕೆಲಸ ಮಾಡಲು ಆಗುತ್ತಿಲ್ಲ. ಬ್ಯಾಟರಿ ಬರುವವರೆಗೆ ಕಾಮಗಾರಿ ಸ್ಥಗಿತಗೊಳ್ಳುತ್ತಿದೆ.

ಈ ಬಗ್ಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Related posts

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಬಳಂಜ ಆನೆಪಿಲ ರಸ್ತೆಯ ಅಭಿವೃದ್ಧಿಗೆ ರಕ್ಷಿತ್ ಶಿವರಾಮ್ ರವರಿಂದ ಅನುದಾನ ನೀಡುವ ಭರವಸೆ

Suddi Udaya

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya
error: Content is protected !!