24.1 C
ಪುತ್ತೂರು, ಬೆಳ್ತಂಗಡಿ
May 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

ಬೆಳ್ತಂಗಡಿ : ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಕಾಮಗಾರಿ ಮುಗ್ರೋಡಿ ಕನ್ಸಟ್ರಕ್ಷನ್ ತೆಕ್ಕೆಗೆ ಬಂದ ನಂತರ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಅಲ್ಲಲ್ಲಿ ನಿಲ್ಲಿಸಿದ್ದ ಮುಗ್ರೋಡಿ ಕನ್ಸೆಕ್ಷನ್ ಸೇರಿದ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಗಳನ್ನು ಕಳವು ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಹೆದ್ದಾರಿಯ ಕಾಮಗಾರಿ ನಡೆಸಲು ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ಬಳಕೆ ಮಾಡಲಾಗುತ್ತಿದ್ದು, ದಿನದ ಕೆಲಸದ ನಂತರ ಈ ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಲಾಗುತ್ತಿದೆ. ಆದರೆ ಕಳ್ಳರು ಹಿಟ್ಯಾಚಿಗಳ ಬ್ಯಾಟರಿ ಮತ್ತು ಡೀಸೆಲ್ ಗೆ ಕನ್ನ ಹಾಕುತ್ತಿದ್ದಾರೆ.

ಹಿಟ್ಯಾಚಿಗಳಿಂದ ಸರಿ ಸುಮಾರು 20 ಬ್ಯಾಟರಿಗಳನ್ನು ಕಳ್ಳರು ಎಗರಿಸಿದ್ದಾರೆ. ರಾತ್ರಿ ಸಮಯದಲ್ಲಿ ಬರುವ ಕಳ್ಳರು ಬ್ಯಾಟರಿಗಳನ್ನು ಕದ್ದುಕೊಂಡು ಹೋಗುತ್ತಿದ್ದಾರೆ. ಸರಿ ಸುಮಾರು ಲಕ್ಷ ಬೆಲೆಬಾಳುವ ಬ್ಯಾಟರಿಗಳು ಈಗಾಗಲೇ ಕಳವಾಗಿದೆ.

ಬ್ಯಾಟರಿ ಕಳ್ಳತನದಿಂದ ಹೆದ್ದಾರಿಯ ಕಾಮಗಾರಿ ಕುಂಠಿತಗೊಳ್ಳುತ್ತಿದ್ದು, ಮುಗ್ರೋಡಿ ಕನ್ಸಟ್ರಕ್ಷನ್ ಸಂಸ್ಥೆಯ ವಾಹನಗಳ ಎಲ್ಲಾ ಕೆಲಸಗಳು ಮಂಗಳೂರಿನಲ್ಲಿ ನಡೆಯುತ್ತಿದೆ. ಬ್ಯಾಟರಿ ಕೂಡ ಮಂಗಳೂರಿನಿಂದ ಪೂರೈಕೆಯಾಗುತ್ತದೆ. ಹೀಗಾಗಿ ಬ್ಯಾಟರಿ ಇಲ್ಲದೆ ಹಿಟ್ಯಾಚಿಗಳು ಕೆಲಸ ಮಾಡಲು ಆಗುತ್ತಿಲ್ಲ. ಬ್ಯಾಟರಿ ಬರುವವರೆಗೆ ಕಾಮಗಾರಿ ಸ್ಥಗಿತಗೊಳ್ಳುತ್ತಿದೆ.

ಈ ಬಗ್ಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Related posts

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಬಂದಾರು : ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಆಶ್ರಯದಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಮತ್ತು ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya
error: Content is protected !!