23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

ಬೆಳ್ತಂಗಡಿ : ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಕಾಮಗಾರಿ ಮುಗ್ರೋಡಿ ಕನ್ಸಟ್ರಕ್ಷನ್ ತೆಕ್ಕೆಗೆ ಬಂದ ನಂತರ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಅಲ್ಲಲ್ಲಿ ನಿಲ್ಲಿಸಿದ್ದ ಮುಗ್ರೋಡಿ ಕನ್ಸೆಕ್ಷನ್ ಸೇರಿದ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಗಳನ್ನು ಕಳವು ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಹೆದ್ದಾರಿಯ ಕಾಮಗಾರಿ ನಡೆಸಲು ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ಬಳಕೆ ಮಾಡಲಾಗುತ್ತಿದ್ದು, ದಿನದ ಕೆಲಸದ ನಂತರ ಈ ದೊಡ್ಡ ದೊಡ್ಡ ಹಿಟ್ಯಾಚಿಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಲಾಗುತ್ತಿದೆ. ಆದರೆ ಕಳ್ಳರು ಹಿಟ್ಯಾಚಿಗಳ ಬ್ಯಾಟರಿ ಮತ್ತು ಡೀಸೆಲ್ ಗೆ ಕನ್ನ ಹಾಕುತ್ತಿದ್ದಾರೆ.

ಹಿಟ್ಯಾಚಿಗಳಿಂದ ಸರಿ ಸುಮಾರು 20 ಬ್ಯಾಟರಿಗಳನ್ನು ಕಳ್ಳರು ಎಗರಿಸಿದ್ದಾರೆ. ರಾತ್ರಿ ಸಮಯದಲ್ಲಿ ಬರುವ ಕಳ್ಳರು ಬ್ಯಾಟರಿಗಳನ್ನು ಕದ್ದುಕೊಂಡು ಹೋಗುತ್ತಿದ್ದಾರೆ. ಸರಿ ಸುಮಾರು ಲಕ್ಷ ಬೆಲೆಬಾಳುವ ಬ್ಯಾಟರಿಗಳು ಈಗಾಗಲೇ ಕಳವಾಗಿದೆ.

ಬ್ಯಾಟರಿ ಕಳ್ಳತನದಿಂದ ಹೆದ್ದಾರಿಯ ಕಾಮಗಾರಿ ಕುಂಠಿತಗೊಳ್ಳುತ್ತಿದ್ದು, ಮುಗ್ರೋಡಿ ಕನ್ಸಟ್ರಕ್ಷನ್ ಸಂಸ್ಥೆಯ ವಾಹನಗಳ ಎಲ್ಲಾ ಕೆಲಸಗಳು ಮಂಗಳೂರಿನಲ್ಲಿ ನಡೆಯುತ್ತಿದೆ. ಬ್ಯಾಟರಿ ಕೂಡ ಮಂಗಳೂರಿನಿಂದ ಪೂರೈಕೆಯಾಗುತ್ತದೆ. ಹೀಗಾಗಿ ಬ್ಯಾಟರಿ ಇಲ್ಲದೆ ಹಿಟ್ಯಾಚಿಗಳು ಕೆಲಸ ಮಾಡಲು ಆಗುತ್ತಿಲ್ಲ. ಬ್ಯಾಟರಿ ಬರುವವರೆಗೆ ಕಾಮಗಾರಿ ಸ್ಥಗಿತಗೊಳ್ಳುತ್ತಿದೆ.

ಈ ಬಗ್ಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Related posts

ಯೂಟ್ಯೂಬ್ ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ ಯವರನ್ನು ಬಂಧಿಸಿದ ಬ್ರಹ್ಮಾವರ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಂಗ ಬಂಧನ

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಬಂದಾರು ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya
error: Content is protected !!