23.1 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

ಬೆಳ್ತಂಗಡಿ : ವೇಣೂರು ವಲಯ ಅರಣ್ಯ ವ್ಯಾಪ್ತಿಯ ಚೆನ್ನೈತೋಡಿ, ಅಜ್ಜಿಬೆಟ್ಟು, ಎಲಿಯನಡುಗೋಡು, ಕುಕ್ಕಿಪಾಡಿ ಗ್ರಾಮಗಳ ವಿವಿಧ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಅಲ್ಲಲ್ಲಿ ಸಾರ್ವಜನಿಕರಿಗೆ ಕಂಡುಬರುತ್ತಿರುವ ಕಾರಣ ತುಳುನಾಡ ರಕ್ಷಣ ವೇದಿಕೆ ವಾಮದಪದವು ಘಟಕದ ವತಿಯಿಂದ ಅರಣ್ಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಮಾಲೋಚನ ಸಭೆಯನ್ನು 2024 ಡಿ.30 ರಂದು ನಡೆಸಿದ್ದು ಚಿರತೆಯನ್ನು ಸೆರೆಹಿಡಿಯಲು ಬೋನು ಅಳವಡಿಸಲು ತೀರ್ಮಾನಿಸಲಾಯಿತು.

ಪ್ರಸ್ತುತ ಚಿರತೆಯ ಓಡಾಟ ಹೆಚ್ಚಾಗಿ ಕಂಡುಬಂದಿರುವ ಚೆನ್ನೈತೋಡಿ ಗ್ರಾಮದ ಚೆನ್ನೈತೋಡಿ ಗುತ್ತು , ಗೋಂಜಗುತ್ತು ಹಾಗೂ ಎಲಿಯನಡುಗೋಡು ಗ್ರಾಮದ ಕುತ್ಲೋಡಿ ಎಂಬಲ್ಲಿ ಒಟ್ಟು ಮೂರು ಜಾಗಗಳಲ್ಲಿ ಸದ್ಯ ಅರಣ್ಯ ಇಲಾಖೆಯ ವತಿಯಿಂದ ಜ.3 ರಂದು ಬೋನು ಅಳವಡಿಸಿದ್ದು ಸಾರ್ವಜನಿಕರು ಹಾಗೂ ವೇಣೂರು ಅರಣ್ಯ ಇಲಾಖೆಯ ವತಿಯಿಂದ ಪ್ರತಿನಿತ್ಯ ನಿಗಾ ವಹಿಸಲಾಗುತ್ತಿದೆ.

ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಮಣ್ಯ ಆಚಾರಿಯವರ ನಿರ್ದೇಶನದಂತೆ ವೇಣೂರು ಶಾಖೆ ಉಪವಲಯ ಅರಣ್ಯ ಅಧಿಕಾರಿ ಸುನಿಲ್ ಕುಮಾರ್, ವಿಶೇಷ ಕರ್ತವ್ಯ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಗಸ್ತು ಅರಣ್ಯ ಪಾಲಕ ಸುರೇಶ್, ಅರಣ್ಯ ವೀಕ್ಷಕರಾದ ಸುಖೇಶ್, ಸಂತೋಷ್, ಕರಾವಳಿ ರಕ್ಷಣಾ ವೇದಿಕೆಯ ಅಧ್ಯಕ್ಷ ಜಯಪ್ರಕಾಶ ಶೆಟ್ಟಿ , ಸಾರ್ವಜನಿಕರಾದ ನಾರಾಯಣ ಸೇವಂತ, ಜನಾರ್ಧನ ಪೂಜಾರಿ, ಸುರೇಶ, ಪ್ರಮೋದ್ ಜೊತೆಯಲ್ಲಿದ್ದರು.

ಬೆಳ್ತಂಗಡಿಯ ಅಗ್ನಿಶಾಮಕ ದಳದ ಅಧಿಕಾರಿ ಉಸ್ಮಾನ್ ಮಾಹಿತಿ ನೀಡಿದರು.

Related posts

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya
error: Content is protected !!