September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

ಬೆಳ್ತಂಗಡಿ : ವೇಣೂರು ವಲಯ ಅರಣ್ಯ ವ್ಯಾಪ್ತಿಯ ಚೆನ್ನೈತೋಡಿ, ಅಜ್ಜಿಬೆಟ್ಟು, ಎಲಿಯನಡುಗೋಡು, ಕುಕ್ಕಿಪಾಡಿ ಗ್ರಾಮಗಳ ವಿವಿಧ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಅಲ್ಲಲ್ಲಿ ಸಾರ್ವಜನಿಕರಿಗೆ ಕಂಡುಬರುತ್ತಿರುವ ಕಾರಣ ತುಳುನಾಡ ರಕ್ಷಣ ವೇದಿಕೆ ವಾಮದಪದವು ಘಟಕದ ವತಿಯಿಂದ ಅರಣ್ಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಮಾಲೋಚನ ಸಭೆಯನ್ನು 2024 ಡಿ.30 ರಂದು ನಡೆಸಿದ್ದು ಚಿರತೆಯನ್ನು ಸೆರೆಹಿಡಿಯಲು ಬೋನು ಅಳವಡಿಸಲು ತೀರ್ಮಾನಿಸಲಾಯಿತು.

ಪ್ರಸ್ತುತ ಚಿರತೆಯ ಓಡಾಟ ಹೆಚ್ಚಾಗಿ ಕಂಡುಬಂದಿರುವ ಚೆನ್ನೈತೋಡಿ ಗ್ರಾಮದ ಚೆನ್ನೈತೋಡಿ ಗುತ್ತು , ಗೋಂಜಗುತ್ತು ಹಾಗೂ ಎಲಿಯನಡುಗೋಡು ಗ್ರಾಮದ ಕುತ್ಲೋಡಿ ಎಂಬಲ್ಲಿ ಒಟ್ಟು ಮೂರು ಜಾಗಗಳಲ್ಲಿ ಸದ್ಯ ಅರಣ್ಯ ಇಲಾಖೆಯ ವತಿಯಿಂದ ಜ.3 ರಂದು ಬೋನು ಅಳವಡಿಸಿದ್ದು ಸಾರ್ವಜನಿಕರು ಹಾಗೂ ವೇಣೂರು ಅರಣ್ಯ ಇಲಾಖೆಯ ವತಿಯಿಂದ ಪ್ರತಿನಿತ್ಯ ನಿಗಾ ವಹಿಸಲಾಗುತ್ತಿದೆ.

ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಮಣ್ಯ ಆಚಾರಿಯವರ ನಿರ್ದೇಶನದಂತೆ ವೇಣೂರು ಶಾಖೆ ಉಪವಲಯ ಅರಣ್ಯ ಅಧಿಕಾರಿ ಸುನಿಲ್ ಕುಮಾರ್, ವಿಶೇಷ ಕರ್ತವ್ಯ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಗಸ್ತು ಅರಣ್ಯ ಪಾಲಕ ಸುರೇಶ್, ಅರಣ್ಯ ವೀಕ್ಷಕರಾದ ಸುಖೇಶ್, ಸಂತೋಷ್, ಕರಾವಳಿ ರಕ್ಷಣಾ ವೇದಿಕೆಯ ಅಧ್ಯಕ್ಷ ಜಯಪ್ರಕಾಶ ಶೆಟ್ಟಿ , ಸಾರ್ವಜನಿಕರಾದ ನಾರಾಯಣ ಸೇವಂತ, ಜನಾರ್ಧನ ಪೂಜಾರಿ, ಸುರೇಶ, ಪ್ರಮೋದ್ ಜೊತೆಯಲ್ಲಿದ್ದರು.

ಬೆಳ್ತಂಗಡಿಯ ಅಗ್ನಿಶಾಮಕ ದಳದ ಅಧಿಕಾರಿ ಉಸ್ಮಾನ್ ಮಾಹಿತಿ ನೀಡಿದರು.

Related posts

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಐದು ದಿನಗಳ ರಾಷ್ಟ್ರ ಮಟ್ಟದ ಎಫ್.ಡಿ.ಪಿ ಕಾರ್ಯಾಗಾರಕ್ಕೆ ಚಾಲನೆ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!