23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ಜ. 3ರಂದು ನಡೆಯಿತು.

ಬೆಳ್ತಂಗಡಿಯ ಅಗ್ನಿಶಾಮಕ ಠಾಣೆ ಹಾಗೂ ಎಸ್.ಡಿ.ಎಂ. ಬಿ.ಎಡ್. ಕಾಲೇಜು ಜಂಟಿ ಸಹಯೋಗದೊಂದಿಗೆ ಆಯೋಜಿಸಲಾದ ಕಾರ್ಯಕ್ರಮವನ್ನು ಅಗ್ನಿಶಾಮಕ ದಳದ ಠಾಣಾಧಿಕಾರಿ ನೀಲಯ್ಯ ಗೌಡ ಉದ್ಘಾಟಿಸಿದರು.

ಠಾಣೆಯ ಕಛೇರಿ ಅಧಿಕಾರಿ ಉಸ್ಮಾನ್ ಅವರು ಮಾತನಾಡಿ, ವಿವಿಧ ರೀತಿಯ ಅಗ್ನಿ ಅವಘಡಗಳ ಬಗ್ಗೆ ತಿಳಿಸಿದರು. ಮಾನವ ನಿರ್ಮಿತ ಹಾಗೂ ಪ್ರಾಕೃತಿಕ ವಿಕೋಪದಿಂದ ಆಗುವ ಅವಘಡ ಕುರಿತು ವಿವಿಧ ಘಟನೆಗಳ ಕುರಿತು ವಿವರಿಸಿದರು.

ಬಾತ್ ರೂಂಗಳಲ್ಲಿ ಗ್ಯಾಸ್ ಗೀಸರ್ ನಿಂದ ಉಂಟಾಗುವ ‘ಸ್ವೀಟ್ ಡೆತ್’ ಬಗ್ಗೆ ವಿವರಿಸಿದರು. ನೀರು ಬಿಸಿಯಾಗುವ ಪ್ರಕ್ರಿಯೆಯಲ್ಲಿ ಹೊರಸೂಸುವ ಕಾರ್ಬನ್ ಮಾನಾಕ್ಸೈಡ್ ನಿಧಾನವಾಗಿ ವ್ಯಕ್ತಿಯ ಪ್ರಜ್ಞೆ ತಪ್ಪಿಸಿ ಸಾವಿಗೆ ಕಾರಣವಾಗುವ ಬಗ್ಗೆ ತಿಳಿಸಿದರಲ್ಲದೆ, ಗೀಸರ್, ಗ್ಯಾಸ್ ಸಿಲಿಂಡರ್ ಗಳನ್ನು ಸ್ನಾನದ ಕೊಠಡಿಯ ಹೊರಗೆ ಅಥವಾ ಮನೆಯ ಹೊರಗೆ ಅಳವಡಿಸುವಂತೆ ಸಲಹೆ ನೀಡಿದರು.

ಮನೆಯ ಹೊರಗಡೆ ಕಸದ ರಾಶಿಗಳಿಗೆ ಬೆಂಕಿ ಕೊಟ್ಟಾಗ, ವಿದ್ಯುತ್ ಅವಘಡ ಸಂಭವಿಸಿದಾಗ, ಬಾವಿಗೆ ಇಳಿಯುವಾಗ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ತಿಳಿಸಿದರು. ಅಗ್ನಿ ಅವಘಡ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ನೀಡಿದರು.ಅಗ್ನಿಶಾಮಕ ದಳದ ಇತರ ಸಿಬ್ಬಂದಿ ಹಾಗೂ ಕಾಲೇಜಿನ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.

ಕಾಲೇಜಿನ ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಪ್ರಾಚಾರ್ಯ ಸಂತೋಷ ಸಲ್ದಾನ ವಂದಿಸಿದರು.

Related posts

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya
error: Content is protected !!