September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ಜ. 3ರಂದು ನಡೆಯಿತು.

ಬೆಳ್ತಂಗಡಿಯ ಅಗ್ನಿಶಾಮಕ ಠಾಣೆ ಹಾಗೂ ಎಸ್.ಡಿ.ಎಂ. ಬಿ.ಎಡ್. ಕಾಲೇಜು ಜಂಟಿ ಸಹಯೋಗದೊಂದಿಗೆ ಆಯೋಜಿಸಲಾದ ಕಾರ್ಯಕ್ರಮವನ್ನು ಅಗ್ನಿಶಾಮಕ ದಳದ ಠಾಣಾಧಿಕಾರಿ ನೀಲಯ್ಯ ಗೌಡ ಉದ್ಘಾಟಿಸಿದರು.

ಠಾಣೆಯ ಕಛೇರಿ ಅಧಿಕಾರಿ ಉಸ್ಮಾನ್ ಅವರು ಮಾತನಾಡಿ, ವಿವಿಧ ರೀತಿಯ ಅಗ್ನಿ ಅವಘಡಗಳ ಬಗ್ಗೆ ತಿಳಿಸಿದರು. ಮಾನವ ನಿರ್ಮಿತ ಹಾಗೂ ಪ್ರಾಕೃತಿಕ ವಿಕೋಪದಿಂದ ಆಗುವ ಅವಘಡ ಕುರಿತು ವಿವಿಧ ಘಟನೆಗಳ ಕುರಿತು ವಿವರಿಸಿದರು.

ಬಾತ್ ರೂಂಗಳಲ್ಲಿ ಗ್ಯಾಸ್ ಗೀಸರ್ ನಿಂದ ಉಂಟಾಗುವ ‘ಸ್ವೀಟ್ ಡೆತ್’ ಬಗ್ಗೆ ವಿವರಿಸಿದರು. ನೀರು ಬಿಸಿಯಾಗುವ ಪ್ರಕ್ರಿಯೆಯಲ್ಲಿ ಹೊರಸೂಸುವ ಕಾರ್ಬನ್ ಮಾನಾಕ್ಸೈಡ್ ನಿಧಾನವಾಗಿ ವ್ಯಕ್ತಿಯ ಪ್ರಜ್ಞೆ ತಪ್ಪಿಸಿ ಸಾವಿಗೆ ಕಾರಣವಾಗುವ ಬಗ್ಗೆ ತಿಳಿಸಿದರಲ್ಲದೆ, ಗೀಸರ್, ಗ್ಯಾಸ್ ಸಿಲಿಂಡರ್ ಗಳನ್ನು ಸ್ನಾನದ ಕೊಠಡಿಯ ಹೊರಗೆ ಅಥವಾ ಮನೆಯ ಹೊರಗೆ ಅಳವಡಿಸುವಂತೆ ಸಲಹೆ ನೀಡಿದರು.

ಮನೆಯ ಹೊರಗಡೆ ಕಸದ ರಾಶಿಗಳಿಗೆ ಬೆಂಕಿ ಕೊಟ್ಟಾಗ, ವಿದ್ಯುತ್ ಅವಘಡ ಸಂಭವಿಸಿದಾಗ, ಬಾವಿಗೆ ಇಳಿಯುವಾಗ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ತಿಳಿಸಿದರು. ಅಗ್ನಿ ಅವಘಡ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ನೀಡಿದರು.ಅಗ್ನಿಶಾಮಕ ದಳದ ಇತರ ಸಿಬ್ಬಂದಿ ಹಾಗೂ ಕಾಲೇಜಿನ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.

ಕಾಲೇಜಿನ ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಪ್ರಾಚಾರ್ಯ ಸಂತೋಷ ಸಲ್ದಾನ ವಂದಿಸಿದರು.

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

Suddi Udaya

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya
error: Content is protected !!