23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ಜ. 3ರಂದು ನಡೆಯಿತು.

ಬೆಳ್ತಂಗಡಿಯ ಅಗ್ನಿಶಾಮಕ ಠಾಣೆ ಹಾಗೂ ಎಸ್.ಡಿ.ಎಂ. ಬಿ.ಎಡ್. ಕಾಲೇಜು ಜಂಟಿ ಸಹಯೋಗದೊಂದಿಗೆ ಆಯೋಜಿಸಲಾದ ಕಾರ್ಯಕ್ರಮವನ್ನು ಅಗ್ನಿಶಾಮಕ ದಳದ ಠಾಣಾಧಿಕಾರಿ ನೀಲಯ್ಯ ಗೌಡ ಉದ್ಘಾಟಿಸಿದರು.

ಠಾಣೆಯ ಕಛೇರಿ ಅಧಿಕಾರಿ ಉಸ್ಮಾನ್ ಅವರು ಮಾತನಾಡಿ, ವಿವಿಧ ರೀತಿಯ ಅಗ್ನಿ ಅವಘಡಗಳ ಬಗ್ಗೆ ತಿಳಿಸಿದರು. ಮಾನವ ನಿರ್ಮಿತ ಹಾಗೂ ಪ್ರಾಕೃತಿಕ ವಿಕೋಪದಿಂದ ಆಗುವ ಅವಘಡ ಕುರಿತು ವಿವಿಧ ಘಟನೆಗಳ ಕುರಿತು ವಿವರಿಸಿದರು.

ಬಾತ್ ರೂಂಗಳಲ್ಲಿ ಗ್ಯಾಸ್ ಗೀಸರ್ ನಿಂದ ಉಂಟಾಗುವ ‘ಸ್ವೀಟ್ ಡೆತ್’ ಬಗ್ಗೆ ವಿವರಿಸಿದರು. ನೀರು ಬಿಸಿಯಾಗುವ ಪ್ರಕ್ರಿಯೆಯಲ್ಲಿ ಹೊರಸೂಸುವ ಕಾರ್ಬನ್ ಮಾನಾಕ್ಸೈಡ್ ನಿಧಾನವಾಗಿ ವ್ಯಕ್ತಿಯ ಪ್ರಜ್ಞೆ ತಪ್ಪಿಸಿ ಸಾವಿಗೆ ಕಾರಣವಾಗುವ ಬಗ್ಗೆ ತಿಳಿಸಿದರಲ್ಲದೆ, ಗೀಸರ್, ಗ್ಯಾಸ್ ಸಿಲಿಂಡರ್ ಗಳನ್ನು ಸ್ನಾನದ ಕೊಠಡಿಯ ಹೊರಗೆ ಅಥವಾ ಮನೆಯ ಹೊರಗೆ ಅಳವಡಿಸುವಂತೆ ಸಲಹೆ ನೀಡಿದರು.

ಮನೆಯ ಹೊರಗಡೆ ಕಸದ ರಾಶಿಗಳಿಗೆ ಬೆಂಕಿ ಕೊಟ್ಟಾಗ, ವಿದ್ಯುತ್ ಅವಘಡ ಸಂಭವಿಸಿದಾಗ, ಬಾವಿಗೆ ಇಳಿಯುವಾಗ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ತಿಳಿಸಿದರು. ಅಗ್ನಿ ಅವಘಡ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ನೀಡಿದರು.ಅಗ್ನಿಶಾಮಕ ದಳದ ಇತರ ಸಿಬ್ಬಂದಿ ಹಾಗೂ ಕಾಲೇಜಿನ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.

ಕಾಲೇಜಿನ ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಪ್ರಾಚಾರ್ಯ ಸಂತೋಷ ಸಲ್ದಾನ ವಂದಿಸಿದರು.

Related posts

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya
error: Content is protected !!