37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಇದರ 2025-2030 ರ ಸಾಲಿನ ನೂತನ ಅಧ್ಯಕ್ಷರಾಗಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಿರಿಯರಾದ ಪಿ.ಕೆ ರಾಜು ಪೂಜಾರಿಯವರು ಆಯ್ಕೆಯಾಗಿದ್ದಾರೆ.


ಡಿ.31 ರಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಕಚೇರಿಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ ಸಂಜೀವ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಮಿತಿಯ ಜಿಲ್ಲಾ ಪ್ರತಿನಿಧಿಯಾಗಿ ಮಹಾವೀರ ಜೈನ್ ನಾರಾವಿ, ತಾಲೂಕು ಸಮಿತಿ ಉಪಾಧ್ಯಕ್ಷರಾಗಿ ವಿನಯ ಕುಮಾರ್ ಹೆಗ್ಡೆ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ನಡ ಗ್ರಾ.ಪಂ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ ಬೊಳಿಯಂಜಿ, ಕೋಶಾಧಿಕಾರಿಯಾಗಿ ದಿನೇಶ್ ಗೌಡ ಪೊಸಂದೋಡಿ ಆಯ್ಕೆಯಾಗಿದ್ದಾರೆ. ಪದನಿಮಿತ್ತ ಕಾರ್ಯದರ್ಶಿಯಾಗಿ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಕಾರ್ಯನಿರ್ವಹಿಸಲಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರು, ಸದಾನಂದ ಪೂಜಾರಿ ಉಂಗಿಲಬೈಲು ಅಳದಂಗಡಿ, ಸಂಜೀವ ಶೆಟ್ಟಿ ಪೆರಾಡಿ, ಜಿನೇಂದ್ರ ಕುಮಾರ್ ನಾರಾವಿ, ಎಂ. ವಿಜಯ ಕುಮಾರ್ ಮರೋಡಿ, ನಿತ್ಯಾನಂದ ರೈ ಕಳೆಂಜ ಕಾಯರ್ತಡ್ಕ, ಜಗದೀಶ್ ಹೆಗ್ಡೆ ನಾರಾವಿ, ಸುರೇಖ ಭಂಡಾರಿ ನಾರಾವಿ, ನಿತ್ಯಾನಂದ ಪೂಜಾರಿ ಕುತ್ಲೂರು, ವಸಂತ ಕೋಟ್ಯಾನ್ ಕಾಶಿಪಟ್ಣ, ಸಂಜೀವ ಶೆಟ್ಟಿ ಉಜಿರೆ ಆಯ್ಕೆಯಾದರು.

Related posts

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya
error: Content is protected !!