March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಇದರ 2025-2030 ರ ಸಾಲಿನ ನೂತನ ಅಧ್ಯಕ್ಷರಾಗಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಿರಿಯರಾದ ಪಿ.ಕೆ ರಾಜು ಪೂಜಾರಿಯವರು ಆಯ್ಕೆಯಾಗಿದ್ದಾರೆ.


ಡಿ.31 ರಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಕಚೇರಿಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ ಸಂಜೀವ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಮಿತಿಯ ಜಿಲ್ಲಾ ಪ್ರತಿನಿಧಿಯಾಗಿ ಮಹಾವೀರ ಜೈನ್ ನಾರಾವಿ, ತಾಲೂಕು ಸಮಿತಿ ಉಪಾಧ್ಯಕ್ಷರಾಗಿ ವಿನಯ ಕುಮಾರ್ ಹೆಗ್ಡೆ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ನಡ ಗ್ರಾ.ಪಂ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ ಬೊಳಿಯಂಜಿ, ಕೋಶಾಧಿಕಾರಿಯಾಗಿ ದಿನೇಶ್ ಗೌಡ ಪೊಸಂದೋಡಿ ಆಯ್ಕೆಯಾಗಿದ್ದಾರೆ. ಪದನಿಮಿತ್ತ ಕಾರ್ಯದರ್ಶಿಯಾಗಿ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಕಾರ್ಯನಿರ್ವಹಿಸಲಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರು, ಸದಾನಂದ ಪೂಜಾರಿ ಉಂಗಿಲಬೈಲು ಅಳದಂಗಡಿ, ಸಂಜೀವ ಶೆಟ್ಟಿ ಪೆರಾಡಿ, ಜಿನೇಂದ್ರ ಕುಮಾರ್ ನಾರಾವಿ, ಎಂ. ವಿಜಯ ಕುಮಾರ್ ಮರೋಡಿ, ನಿತ್ಯಾನಂದ ರೈ ಕಳೆಂಜ ಕಾಯರ್ತಡ್ಕ, ಜಗದೀಶ್ ಹೆಗ್ಡೆ ನಾರಾವಿ, ಸುರೇಖ ಭಂಡಾರಿ ನಾರಾವಿ, ನಿತ್ಯಾನಂದ ಪೂಜಾರಿ ಕುತ್ಲೂರು, ವಸಂತ ಕೋಟ್ಯಾನ್ ಕಾಶಿಪಟ್ಣ, ಸಂಜೀವ ಶೆಟ್ಟಿ ಉಜಿರೆ ಆಯ್ಕೆಯಾದರು.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

Suddi Udaya

ನಾರಾವಿಯಲ್ಲಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾಲಕತ್ವದ ಉಮಾಮಹೇಶ್ವರ ಪೆಟ್ರೋಲ್ ಪಂಪ್ ಶುಭಾರಂಭ

Suddi Udaya
error: Content is protected !!