30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಇದರ 2025-2030 ರ ಸಾಲಿನ ನೂತನ ಅಧ್ಯಕ್ಷರಾಗಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಿರಿಯರಾದ ಪಿ.ಕೆ ರಾಜು ಪೂಜಾರಿಯವರು ಆಯ್ಕೆಯಾಗಿದ್ದಾರೆ.


ಡಿ.31 ರಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಕಚೇರಿಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ ಸಂಜೀವ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಮಿತಿಯ ಜಿಲ್ಲಾ ಪ್ರತಿನಿಧಿಯಾಗಿ ಮಹಾವೀರ ಜೈನ್ ನಾರಾವಿ, ತಾಲೂಕು ಸಮಿತಿ ಉಪಾಧ್ಯಕ್ಷರಾಗಿ ವಿನಯ ಕುಮಾರ್ ಹೆಗ್ಡೆ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ನಡ ಗ್ರಾ.ಪಂ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ ಬೊಳಿಯಂಜಿ, ಕೋಶಾಧಿಕಾರಿಯಾಗಿ ದಿನೇಶ್ ಗೌಡ ಪೊಸಂದೋಡಿ ಆಯ್ಕೆಯಾಗಿದ್ದಾರೆ. ಪದನಿಮಿತ್ತ ಕಾರ್ಯದರ್ಶಿಯಾಗಿ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಕಾರ್ಯನಿರ್ವಹಿಸಲಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರು, ಸದಾನಂದ ಪೂಜಾರಿ ಉಂಗಿಲಬೈಲು ಅಳದಂಗಡಿ, ಸಂಜೀವ ಶೆಟ್ಟಿ ಪೆರಾಡಿ, ಜಿನೇಂದ್ರ ಕುಮಾರ್ ನಾರಾವಿ, ಎಂ. ವಿಜಯ ಕುಮಾರ್ ಮರೋಡಿ, ನಿತ್ಯಾನಂದ ರೈ ಕಳೆಂಜ ಕಾಯರ್ತಡ್ಕ, ಜಗದೀಶ್ ಹೆಗ್ಡೆ ನಾರಾವಿ, ಸುರೇಖ ಭಂಡಾರಿ ನಾರಾವಿ, ನಿತ್ಯಾನಂದ ಪೂಜಾರಿ ಕುತ್ಲೂರು, ವಸಂತ ಕೋಟ್ಯಾನ್ ಕಾಶಿಪಟ್ಣ, ಸಂಜೀವ ಶೆಟ್ಟಿ ಉಜಿರೆ ಆಯ್ಕೆಯಾದರು.

Related posts

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

Suddi Udaya

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya
error: Content is protected !!