25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಂತ್ಯದ ನೇತ್ರತ್ವದಲ್ಲಿ ಜ. 03 ರಂದು ಜ್ಞಾನನಿಲಯ ಬೆಳ್ತಂಗಡಿಯಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಗಣ್ಯ ವ್ಯಕ್ತಿಗಳನ್ನು ,ವಿವಿಧ ಸಂಘ ಸಂಸ್ಥೆಗಳ ನಾಯಕರನ್ನು ಹಾಗೂ ಧರ್ಮಪ್ರಾಂತ್ಯದ ವಿವಿಧ ಕಾರ್ಯಗಳಿಗೆ ಸಹಕರಿಸುತ್ತಿರುವರನ್ನು ಕರೆದು ಪ್ರತಿವರ್ಷದಂತೆ ಈ ವರ್ಷ ಕೂಡಾ ಸೌಹಾರ್ದ ಕೂಟವನ್ನು ಏರ್ಪಡಿಸಲಾಗಿದೆ.

‘ಸಾಮಾಜಿಕ ಭಾವೈಕ್ಯತೆ ಕಾಪಾಡುವಲ್ಲಿ ನಮ್ಮ ಪಾತ್ರ’ ಎನ್ನುವ ವಿಷಯದ ಕುರಿತು ಮುಖ್ಯ ಸಂದೇಶವನ್ನು ಡಾ. ಟಿ. ಕೃಷ್ಣಮೂರ್ತಿ ನೀಡಿದರು. ಕಾರ್ಯಕ್ರಮದ ಆಶಯದ ಕುರಿತು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿ ಇವರು ವಿವರಿಸಿ ಸ್ವಾಗತಿಸಿದರು.

ಹೊಸವರ್ಷದ ಹಾಗೂ ಕ್ರಿಸ್ಮಸ್ ಹಬ್ಬದ ಸಂಭ್ರಮವನ್ನು ಬೆಳ್ತಂಗಡಿ ತಾಲೂಕು ತಹಸೀಲ್ದಾರ್ ಫ್ರಥ್ವಿ ಸಾನಿಕಂ ಇವರ ನೇತ್ರತ್ವದಲ್ಲಿ ತಾಲೂಕಿನ ವಿವಿಧ ಗಣ್ಯ ವ್ಯಕ್ತಿಗಳು ಜೊತೆ ಸೇರಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಸಂಜಾತ್ ಅವರು ವಿತರಿಸಿದರು. ಹೊಸ ವರ್ಷದ ಅದೃಷ್ಟ ವ್ಯಕ್ತಿಯನ್ನು ಚೀಟಿ ತೆಗೆಯುವ ಮೂಲಕ ಆಯ್ಕೆಮಾಡಿ ಬಹುಮಾನವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ವಿತರಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಪ್ರೀಯ ಅಗ್ನೆಸ್ ಚಾಕೋ , ಬೆಳ್ತಂಗಡಿ ತಾಲೂಕು ಕಾಮಾಗಾರಿಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಮುಖ್ಯಸ್ಥರು ಮತ್ತು ಸಿಬ್ಬಂದಿ ವರ್ಗದವರು, ಪಟ್ಟಣ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ನ ವಿವಿಧ ಗಣ್ಯ ವ್ಯಕ್ತಿಗಳು, ಮಾದ್ಯಮ ಮಿತ್ರರು, ಸೌಹಾರ್ದ ವೇದಿಕೆಯ ವಿವಿಧ ಗಣ್ಯ ವ್ಯಕ್ತಿಗಳು, ಧರ್ಮಗುರುಗಳು, ಧರ್ಮಭಗಿನಿಯರು ಹಾಗೂ ಅನೇಕ ವಿಶಿಷ್ಟ ಆಹ್ವಾನಿತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಾರಿಯಾಂಬಿಕ ಆಂಗ್ಲ ಮಾದ್ಯಮ ಶಾಲೆ ಬಂಗಾಡಿ ಇಲ್ಲಿನ ವಿದ್ಯಾರ್ಥಿನಿಯರು ಸ್ವಾಗತ ನೃತ್ಯವನ್ನು ಮಾಡಿದರು. ಧರ್ಮಪ್ರಾಂತ್ಯದ ಫ್ಯಾಮಿಲಿ ಅಪೋಸ್ಟೋಲೇಟ್ ಇದರ ನಿರ್ದೇಶಕರಾದ ವಂದನಿಯ ಫಾದರ್ ಥೋಮಸ್ ಪುಲ್ಲಾಟ್ ಇವರು ಪಾರ್ಥನೆಯನ್ನು ನೆರವೇರಿಸಿದರು. ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅತೀ ವಂದನಿಯ ಫಾದರ್ ಜೋಸೆಫ್ ವಲಿಯ ಪರಂಬಿಲ್ ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ಡಿ.ಕೆ. ಆರ್. ಡಿ.ಎಸ್ ನಿರ್ದೇಶಕರಾದ ವಂದನಿಯ ಫಾದರ್ ಬಿನೋಯಿ .ಏ. ಜೆ ಹಾಗೂ ಡಿ.ಕೆ. ಆರ್. ಡಿ.ಎಸ್ ನ ಸಿಬ್ಬಂದಿಯಾದ ಶ್ರೀಮತಿ ಸಿಸಿಲೀಯಾ ನೆರವೇರಿಸಿದರು.

Related posts

ಚಾರ್ಮಾಡಿ ಘಾಟಿ: ಮರ ಧಾರಾಶಾಹಿ-ಸಂಚಾರ ಸ್ಥಗಿತ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!