25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಅನ್ನಾರು ಸೇತುವೆಯ ಕೆಳಭಾಗದಲ್ಲಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ಯಾರೋ ಕಿಡಿಗೇಡಿಗಳು ಹತ್ಯೆಗೈಯಲ್ಪಟ್ಟ ಜಾನುವಾರುಗಳ ತಲೆ ಹಾಗೂ ಇತರೇ ತ್ಯಾಜ್ಯಗಳನ್ನು ಸುಮಾರು 11 ಸಣ್ಣ ಸಣ್ಣ ಪ್ಲಾಸ್ಟಿಕ್ ಗೋಣಿ ಚೀಲಗಳಲ್ಲಿ ತುಂಬಿಸಿ‌ ಎಸೆದು ಹೋಗಿರುವ ಘಟನೆ ಡಿ.17 ರಂದು ನಡೆದಿದ್ದು. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 4,12 ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು.ಈ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಜ.4 ರಂದು ಧರ್ಮಸ್ಥಳ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕತ್ರಿಗುಡ್ಡೆ ನಿವಾಸಿ ಆದಂ ಮಗ ಮಹಮ್ಮದ್ ಇರ್ಷಾದ್ (28) ಮತ್ತು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಬದ ಸುನ್ನತ್ ಕೆರೆ ನಿವಾಸಿ ರವೂಫ್.ಎಂ.ಇಬ್ರಾಹಿಂ ಮಗ ಮಹಮ್ಮದ್ ಅಜ್ಮಲ್(30) ಬಂಧಿತ ಆರೋಪಿಗಳು.ಆರೋಪಿಗಳನ್ನು ಮಾನ್ಯ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು.ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದ ಸಿಬ್ಬಂದಿಗಳು ಭಾಗಿಯಾಗಿದ್ದರು.

Related posts

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya
error: Content is protected !!