38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಇದರ 2025-2030 ರ ಸಾಲಿನ ನೂತನ ಅಧ್ಯಕ್ಷರಾಗಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಿರಿಯರಾದ ಪಿ.ಕೆ ರಾಜು ಪೂಜಾರಿಯವರು ಆಯ್ಕೆಯಾಗಿದ್ದಾರೆ.


ಡಿ.31 ರಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಕಚೇರಿಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ ಸಂಜೀವ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಮಿತಿಯ ಜಿಲ್ಲಾ ಪ್ರತಿನಿಧಿಯಾಗಿ ಮಹಾವೀರ ಜೈನ್ ನಾರಾವಿ, ತಾಲೂಕು ಸಮಿತಿ ಉಪಾಧ್ಯಕ್ಷರಾಗಿ ವಿನಯ ಕುಮಾರ್ ಹೆಗ್ಡೆ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ನಡ ಗ್ರಾ.ಪಂ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ ಬೊಳಿಯಂಜಿ, ಕೋಶಾಧಿಕಾರಿಯಾಗಿ ದಿನೇಶ್ ಗೌಡ ಪೊಸಂದೋಡಿ ಆಯ್ಕೆಯಾಗಿದ್ದಾರೆ. ಪದನಿಮಿತ್ತ ಕಾರ್ಯದರ್ಶಿಯಾಗಿ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಕಾರ್ಯನಿರ್ವಹಿಸಲಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರು, ಸದಾನಂದ ಪೂಜಾರಿ ಉಂಗಿಲಬೈಲು ಅಳದಂಗಡಿ, ಸಂಜೀವ ಶೆಟ್ಟಿ ಪೆರಾಡಿ, ಜಿನೇಂದ್ರ ಕುಮಾರ್ ನಾರಾವಿ, ಎಂ. ವಿಜಯ ಕುಮಾರ್ ಮರೋಡಿ, ನಿತ್ಯಾನಂದ ರೈ ಕಳೆಂಜ ಕಾಯರ್ತಡ್ಕ, ಜಗದೀಶ್ ಹೆಗ್ಡೆ ನಾರಾವಿ, ಸುರೇಖ ಭಂಡಾರಿ ನಾರಾವಿ, ನಿತ್ಯಾನಂದ ಪೂಜಾರಿ ಕುತ್ಲೂರು, ವಸಂತ ಕೋಟ್ಯಾನ್ ಕಾಶಿಪಟ್ಣ, ಸಂಜೀವ ಶೆಟ್ಟಿ ಉಜಿರೆ ಆಯ್ಕೆಯಾದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya
error: Content is protected !!